
ಬೆಂಗಳೂರು(ಜು.04): ರಾಜ್ಯದಲ್ಲಿ ಸತತ ಎರಡನೇ ದಿನ ಕೊರೋನಾ ಸೋಂಕು ಪ್ರಕರಣಗಳು ಇಳಿಕೆಯಾಗಿದ್ದು, ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಕೂಡ ಶೇ.3 ಆಸುಪಾಸಿಗೆ ತಗ್ಗಿದೆ. ಭಾನುವಾರ 826 ಕೊರೋನಾ ಹೊಸ ಪ್ರಕರಣಗಳು ವರದಿಯಾಗಿದ್ದು, 600 ಮಂದಿ ಗುಣಮುಖರಾಗಿದ್ದಾರೆ.
ಸೋಂಕಿತರ ಸಾವಾಗಿಲ್ಲ. ಸದ್ಯ 6,666 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ/ಆರೈಕೆಯಲ್ಲಿದ್ದಾರೆ. 25 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.3.2 ರಷ್ಟುದಾಖಲಾಗಿದೆ. ಶನಿವಾರದಷ್ಟೇ ಸೋಂಕು ಪರೀಕ್ಷೆಗಳು ನಡೆದಿದ್ದು, ಹೊಸ ಪ್ರಕರಣಗಳು ಮಾತ್ರ 149 ಇಳಿಕೆಯಾಗಿವೆ. (ಶನಿವಾರ 975, ಸಾವು ಒಂದು)
ಕರ್ನಾಟಕದಲ್ಲಿ 3 ದಿನದ ಬಳಿಕ 1000ಕ್ಕಿಂತ ಕೆಳಗಿಳಿದ ಕೊರೋನಾ ಸೋಂಕು
ನಾಲ್ಕು ತಿಂಗಳ ಬಳಿಕ ಗುರುವಾರ ಮತ್ತು ಶುಕ್ರವಾರ ಹೊಸ ಪ್ರಕರಣಗಳು ಒಂದು ಸಾವಿರ ಗಡಿದಾಟಿದ್ದವು. ಆದರೆ, ಕಳೆದ ಎರಡು ದಿನಗಳಿಂದ ಇಳಿಮುಖವಾಗಿ ವರದಿಯಾಗುತ್ತಿವೆ. ಜತೆಗೆ ಶೇ.4ಕ್ಕಿಂತ ಅಧಿಕವಿದ್ದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರವು ಶೇ.3ಕ್ಕೆ ತಗ್ಗಿದೆ. ಸಕ್ರಿಯ ಸೋಂಕಿತರ ಪೈಕಿ 66 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, 6600 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ.
ಎಲೆಲ್ಲಿ ಸೋಂಕು:
ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 871 ಪತ್ತೆಯಾಗಿವೆ. ಉಳಿದಂತೆ ಮೈಸೂರು 22, ದಕ್ಷಿಣ ಕನ್ನಡ 14, ಕೋಲಾರ 9, ಶಿವಮೊಗ್ಗ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ತಲಾ 6, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ತಲಾ 5, ರಾಮನಗರ 4, ಬೆಳಗಾವಿ ಮತ್ತು ಕಲಬುರಗಿ ತಲಾ 3, ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಹಾಸನ, ರಾಯಚೂರು ತಲಾ ಇಬ್ಬರಿಗೆ, ಬಳ್ಳಾರಿ, ಮಂಡ್ಯ ತಲಾ ಒಬ್ಬರಿಗೆ ಸೋಂಕು ತಗುಲಿದೆ. 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಲ್ಲಿ ಈವರೆಗೆ 39.7 ಲಕ್ಷ ಸೋಂಕು ಪ್ರಕರಣಗಳು ವರದಿಯಾಗಿದ್ದು, 39.2 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 40,077 ಮಂದಿ ಸಾವಿಗೀಡಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ