ವಾರದಲ್ಲಿ ಕೋವಿಡ್‌ ಸಾವಿನ ಸಂಖ್ಯೆ ಇಳಿಕೆ: ಸಚಿವ ಸುಧಾಕರ್‌ ವಿಶ್ವಾಸ

Kannadaprabha News   | Asianet News
Published : Jun 05, 2021, 07:08 AM IST
ವಾರದಲ್ಲಿ ಕೋವಿಡ್‌ ಸಾವಿನ ಸಂಖ್ಯೆ ಇಳಿಕೆ: ಸಚಿವ ಸುಧಾಕರ್‌ ವಿಶ್ವಾಸ

ಸಾರಾಂಶ

*ಪಾಸಿಟಿವಿಟಿ ದರ ಶೇ.5ಕ್ಕೆ ಇಳಿಸುವ ಗುರಿ * ಗ್ರಾಮೀಣ ಭಾಗದಲ್ಲೂ ಸೋಂಕು ಇಳಿಕೆ * ಕೋವಿಡ್‌ನಿಂದ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಇಲ್ಲ, ಆದರೆ ಮುನ್ನೆಚ್ಚರಿಕೆ ಅಗತ್ಯ  

ಬೆಂಗಳೂರು(ಜೂ.05): ರಾಜ್ಯದಲ್ಲಿ ಕೋವಿಡ್‌ ಸೋಂಕಿನ ದೈನಂದಿನ ಪ್ರಕರಣಗಳಲ್ಲಿ ಏರುಪೇರು ಕಂಡುಬರುತ್ತಿದೆ. ಆದರೆ ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ. ಐಸಿಯು, ವೆಂಟಿಲೇಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವು ಸೋಂಕಿತರ ಸಾವು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿದಿನ ಸಾವಿನ ಸಂಖ್ಯೆ 450 ದಾಟುತ್ತಿದೆ. ಇನ್ನೊಂದು ವಾರದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಮಾಡುವ ಗುರಿ ಇದೆ. ಹೊಸ ಪ್ರಕರಣಗಳಿಗಿಂತ ಪಾಸಿಟಿವಿಟಿ ದರದ ಕಡೆ ನಾವು ಗಮನ ನೀಡಬೇಕು. ಕಳೆದ ಎರಡು ದಿನಗಳಲ್ಲಿ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಆಗಿಲ್ಲ. ಗ್ರಾಮೀಣ ಭಾಗದಲ್ಲಿಯೂ ಸೋಂಕು ಪ್ರಕರಣಗಳಲ್ಲಿ ಇಳಿಕೆ ಕಂಡು ಬರುತ್ತಿದೆ ಎಂದು ಸುಧಾಕರ್‌ ವಿವರಿಸಿದರು.

ಕೋವಿಡ್‌-19ರಿಂದ ಮಕ್ಕಳಲ್ಲಿ ಹೇಳಿಕೊಳ್ಳುವಂತಹ ಪ್ರಭಾವ ಆಗುವುದಿಲ್ಲ. ಜ್ವರದಂತಹ ಲಕ್ಷಣಗಳು ಗೋಚರಿಸಿ ಬಹುಬೇಗ ಗುಣಮುಖರಾಗುತ್ತಾರೆ. ಪೋಷಕರು ಹೆದರಿಕೊಳ್ಳುವ ಅಗತ್ಯ ಇಲ್ಲ. ಅದರೆ ಮುನ್ನೆಚ್ಚರಿಕೆ ಇರಲಿ ಎಂದು ಸಚಿವರು ಹೇಳಿದ್ದಾರೆ.

ಸಖತ್ ಸಂಶೋಧನೆ; ಕೊರೋನಾ ಬಂದೋದವ ಮುಂದಿನ 10 ತಿಂಗಳು ಬಚಾವ್!

ವಿದ್ಯಾರ್ಥಿಗಳ ರಕ್ಷಣೆ ಸರ್ಕಾರದ ಆದ್ಯ ಕರ್ತವ್ಯ. ಆ ಬಳಿಕ ಪರೀಕ್ಷೆಯ ವಿಚಾರ. ಪಿಯುಸಿ ಪರೀಕ್ಷೆ ವಿಚಾರದಲ್ಲಿ ಶಿಕ್ಷಣ ಸಚಿವರು ನನ್ನನ್ನು ಕರೆದು ಮಾತುಕತೆ ನಡೆಸಬಹುದು. ತಾಂತ್ರಿಕ ಸಲಹಾ ಸಮಿತಿಯ ಜೊತೆಯೂ ಈ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪರೀಕ್ಷೆಗಳನ್ನು ಖುದ್ದು ಪ್ರಧಾನಿಯವರೇ ರದ್ದು ಪಡಿಸಿದ್ದಾರೆ. ಈ ಎರಡು ಸಿಲೆಬಸ್‌ನಲ್ಲಿ ಮೌಲ್ಯಮಾಪನ ಸುಲಭ. ಸೆಮಿಸ್ಟರ್‌ ಲೆಕ್ಕದಲ್ಲಿ ಮೌಲ್ಯಮಾಪನ ನಡೆಯುತ್ತದೆ. ಆದರೆ ನಮಗೆ ಈ ಅವಕಾಶ ಇಲ್ಲ. ಪರೀಕ್ಷೆ ಇಲ್ಲದೆ ಎಲ್ಲರನ್ನೂ ಪಾಸ್‌ ಮಾಡಿದರೆ ತೊಂದರೆ ಆಗುತ್ತದೆ. ಮೌಲ್ಯಮಾಪನ ಹೇಗೆ ನಡೆಸಬೇಕು ಎಂಬುದರ ಚರ್ಚೆ ಆಗಬೇಕು ಎಂದು ಆರೋಗ್ಯ ಸಚಿವರು ಅಭಿಪ್ರಾಯ ಪಟ್ಟರು.

ದೇಶದಲ್ಲೇ ಅತಿ ಹೆಚ್ಚು ಜನರಿಗೆ ಬೆಂಗಳೂರಿನಲ್ಲಿ ಕೋವಿಡ್‌ ಲಸಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಒಂದು ಕೋಟಿ ಮೀರಿ ಜನರಿದ್ದರೂ ಅದರಲ್ಲಿ ಶೇ. 28 ಮಂದಿಗೆ ಲಸಿಕೆ ವಿತರಿಸಲಾಗಿದೆ. ಇದಕ್ಕಾಗಿ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ಅಭಿನಂದಿಸುವುದಾಗಿ ಡಾ. ಸುಧಾಕರ್‌ ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ