
ಬೆಂಗಳೂರು(ಆ.20): ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು, ಮೂರನೇ ಅಲೆ ಕುರಿತು ಆತಂಕಪಡುವ ಅಗತ್ಯವಿಲ್ಲ. ಕಟ್ಟುನಿಟ್ಟಿನ ಕ್ರಮಗಳ ಮೂಲಕ 3ನೇ ಅಲೆ ನಿಯಂತ್ರಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಬಗ್ಗೆ ಅನಿಶ್ಚಿತತೆ, ಆತಂಕದ ಅಗತ್ಯವಿಲ್ಲ. ಸೋಂಕು ತಡೆಯಲು ಸರ್ಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದ್ದು ಕೊರೋನಾ ಮಾರ್ಗಸೂಚಿ ಪಾಲಿಸುವ ಮೂಲಕ ಜನರು ಬೆಂಬಲ ನೀಡಬೇಕು ಎಂದರು.
2 ಡೋಸ್ ಲಸಿಕೆ ಪಡೆದ 87 ಸಾವಿರ ಜನರಿಗೆ ಕೊರೋನಾ
ಲಸಿಕೆ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ. ಆಕ್ಸಿಜನ್, ಬೆಡ್ಗಳ ಕೊರತೆ ಉಂಟಾಗದಂತೆ ಸಿದ್ಧತೆ ನಡೆಸಿದ್ದೇವೆ. ವೈದ್ಯಕೀಯ ಸಲಕರಣೆ, ಔಷಧ ಕೊರತೆಯೂ ಇಲ್ಲ. ಜತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ಸಿಬ್ಬಂದಿ ಕೊರತೆಯನ್ನೂ ನೀಗಿಸಿದ್ದು ಎಲ್ಲಾ ರೀತಿಯಲ್ಲೂ ಸರ್ಕಾರ ತಯಾರಿ ನಡೆಸಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ