ಶಬರಿಮಲೆಯಲ್ಲಿ ಮಹತ್ವದ ಕಂಡೀಶನ್ಸ್ : ಯಾರೆಗೆಲ್ಲಾ ಇಲ್ಲ ಪ್ರವೇಶ

Kannadaprabha News   | Asianet News
Published : Nov 09, 2020, 07:38 AM IST
ಶಬರಿಮಲೆಯಲ್ಲಿ ಮಹತ್ವದ ಕಂಡೀಶನ್ಸ್ : ಯಾರೆಗೆಲ್ಲಾ ಇಲ್ಲ ಪ್ರವೇಶ

ಸಾರಾಂಶ

ಶಬರಿಮಲೆಗೆ ತೆರಳುವ ಭಕ್ತರೇ ಇಲ್ಲೊಮ್ಮೆ ಗಮನಿಸಿ.. ಇಲ್ಲಿದೆ ಕೆಲ ಮಹತ್ವದ ಸೂಚನೆ 

ಬೆಂಗಳೂರು (ನ.09):  ಈ ತಿಂಗಳ 16ರಿಂದ ಆರಂಭವಾಗಲಿರುವ ಕೇರಳದ ಶಬರಿಮಲೆ ಯಾತ್ರೆಗೆ ಹೋಗುವ ರಾಜ್ಯದ ಯಾತ್ರಾರ್ಥಿಗಳಿಗೆ ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಬಿಗಿ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಶಬರಿಮಲೆ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಹೀಗಾಗಿ ಯಾತ್ರೆಗೆ ತೆರಳುವ ಮುನ್ನ ನೋಂದಣಿ ಕಡ್ಡಾಯವಾಗಿದೆ. ಒಂದು ದಿನಕ್ಕೆ 1 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುವುದು. ವಾರಾಂತ್ಯಕ್ಕೆ ಅದನ್ನು 2 ಸಾವಿರಕ್ಕೆ ಹೆಚ್ಚಿಸಲಾಗುವುದು. ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯವಾಗಿದೆ.

ಶಬರಿಮಲೆ ದೇಗುಲದಿಂದ ಮಹತ್ವದ ಆದೇಶ : ಭಕ್ತರೇ ಗಮನಿಸಿ .

10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟಭಕ್ತರಿಗೆ, ಪೂರ್ವಕಾಯಿಲೆಗಳನ್ನು ಹೊಂದಿದವರಿಗೆ ಅವಕಾಶ ಇರುವುದಿಲ್ಲ, ಯಾತ್ರೆಗೆ ಹೋಗುವವರು ಬಿಪಿಎಲ್‌ ಕಾರ್ಡ್‌, ಆಯುಷ್ಮಾನ್‌ ಕಾರ್ಡ್‌, ಇತ್ಯಾದಿ ಗುರುತಿನ ಕಾರ್ಡ್‌ ತೆಗೆದುಕೊಂಡು ಹೋಗಬೇಕು.

ಈ ಬಾರಿ ಪಂಪಾನದಿ ಸ್ನಾನ ಇರುವುದಿಲ್ಲ ಎಂದು ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ