
ಆನೇಕಲ್ (ಮೇ.23): ನೀವು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರ್ತಾ ಇದ್ದೀರಾ? ಅಲ್ಲಿಂದ ಇಲ್ಲಿ ಬರಲು ಪಾಸ್ ಪಡೆದಿದ್ದರೆ ಎಚ್ಚರ. ತಮಿಳುನಾಡಿನ ಪಾಸ್ ಇಲ್ಲಿ ನಡೆಯಲ್ಲ.
ಕೊರೋನಾ ಕಾಲದಲ್ಲಿ ಜನರ ತುರ್ತು ಸಂಚಾರಕ್ಕೆ ತಮಿಳುನಾಡು ಸರ್ಕಾರ ಪಾಸ್ ಕೊಡುತ್ತಿದೆ. ಆದರೆ ಅಂತಹ ಪಾಸ್ ಪಡೆದು ಕರ್ನಾಟಕಕ್ಕೆ ಬಂದರೆ ಇಲ್ಲಿ ಅವಕಾಶವಿರುವುದಿಲ್ಲ. ಇಲ್ಲಿ ಪೊಲೀಸ್ ಇಲಾಖೆ ತಮಿಳುನಾಡು ಪಾಸ್ ಪಡೆದು ಬರುವವರಿಗೆ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ.
ಕೊರೊನಾದಿಂದ ಮುಕ್ತಿಗಾಗಿ ದೇವಸ್ಥಾನ ನಿರ್ಮಾಣ, 48 ದಿನ ವಿಶೇಷ ಪೂಜೆ
ಸೂಕ್ತ ದಾಖಲೆಯಿಲ್ಲದೇ ಬಂದ ಎಲ್ಲಾ ವಾಹನಗಳನ್ನು ಎಲೆಕ್ಟ್ರಾನಿಕ್ ಸಿಟಿ ಹಾಗೂ ಪರಪ್ಪನ ಅಗ್ರಹಾರ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಇಲ್ಲಿ ಸದ್ಯ 25 ಹೆಚ್ಚು ಪೊಲೀಸ್ ಸಿಬ್ಬಂದಿ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ತಮಿಳುನಾಡಿನಿಂದ ಬಂದ ಹಲವು ವಾಹನಗಳನ್ನು ಕರ್ನಾಟಕದಲ್ಲಿ ಸೀಜ್ ಮಾಡಲಾಗಿದೆ.
ತುರ್ತಾಗಿ ಪಾಸ್ ಪಡೆದು ಬಂದರೂ ಕರ್ನಾಟಕದಲ್ಲಿ ಅವಕಾಶವಿರುವುದಿಲ್ಲ. ಈ ನಿಟ್ಟಿನಲ್ಲಿ ನಾಗರಿಕರು ಎಚ್ಚರಿಕೆಯಿಂದ ಇರಬೇಕಾಗುತ್ತದೆ.
ರಾಜ್ಯದಲ್ಲಿ ಸದ್ಯ ಮಹಾಮಾರಿ ಅಟ್ಟಹಾಸ ಜೋರಾಗಿಯೇ ಇದ್ದು ಈ ನಿಟ್ಟಿನಲ್ಲಿ ಇಲ್ಲಿ ಯಾವುದೇ ಪಾಸ್ ವ್ಯವಸ್ಥೆಯನ್ನು ಮಾಡಿಲ್ಲ. ಸರ್ಕಾರ ಯಾವುದೇ ಪಾಸ್ ವ್ಯವಸ್ಥೆ ಬಗ್ಗೆ ಈ ಬಾರಿ ಸೂಚನೆ ನೀಡಿಲ್ಲ. ಜನ ಸಂಚಾರ ನಿಯಂತ್ರಣದ ಉದ್ದೇಶದಿಂದ ಅಲ್ಲದೇ ಪಾಸ್ಗಳನ್ನು ಬಳಸಿಕೊಂಡು ಜನರು ಅನಗತ್ಯ ಸಂಚಾರ ಮಾಡುಬಹುದಾದ ನಿಟ್ಟಿನಲ್ಲಿ ಈ ಬಾರಿ ಪಾಸ ವ್ಯವಸ್ಥೆ ಕೈ ಬಿಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ