ರಾಜ್ಯದಲ್ಲಿ 6 ತಿಂಗಳಲ್ಲೇ ಅತಿ ಕಡಿಮೆ ಕೊರೋನಾ: 20 ಜಿಲ್ಲೆ, ಒಂದೂ ಸಾವಿಲ್ಲ!

Published : Nov 01, 2020, 07:29 AM ISTUpdated : Nov 01, 2020, 12:52 PM IST
ರಾಜ್ಯದಲ್ಲಿ 6 ತಿಂಗಳಲ್ಲೇ ಅತಿ ಕಡಿಮೆ ಕೊರೋನಾ: 20 ಜಿಲ್ಲೆ, ಒಂದೂ ಸಾವಿಲ್ಲ!

ಸಾರಾಂಶ

ರಾಜ್ಯದಲ್ಲಿ ಮತ್ತೆ ಗುಣಮುಖರ ಸಂಖ್ಯೆ ಅಧಿಕ| ನಿನ್ನೆ 4,471 ಕೇಸ್‌| 7153 ಡಿಸ್ಚಾರ್ಜ್| 7 ಲಕ್ಷ ದಾಟಿದ ಗುಣಮುಖರ ಸಂಖ್ಯೆ| ಪಾಸಿಟಿವಿಟಿ ದರ ಶೇ.3.97ಕ್ಕೆ ಇಳಿಮುಖ| ಸಕ್ರಿಯ ಸೋಂಕಿತರ ಸಂಖ್ಯೆ 86 ಸಾವಿರಕ್ಕಿಳಿಕೆ| 52 ಸಾವು; 15 ಜಿಲ್ಲೆಗಳಲ್ಲಿ ಒಂದೂ ಸಾವು ಇಲ್ಲ| ಇಂದು ಸೋಂಕಿತರ ಸಂಖ್ಯೆ 8 ಲಕ್ಷಕ್ಕೇರಿಕೆ ಸಾಧ್ಯತೆ

ಬೆಂಗಳೂರು(ನ.01): ರಾಜ್ಯದಲ್ಲಿ ಸತತ 10ನೇ ದಿನವಾದ ಶನಿವಾರ ಕೂಡ ಕೊರೋನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಅಲ್ಲದೆ, ಸೋಂಕಿತರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರ ಬಿಡುಗಡೆಯೊಂದಿಗೆ ಒಟ್ಟು ಗುಣಮುಖವಾದವರ ಸಂಖ್ಯೆ 7 ಲಕ್ಷ ಗಡಿ ದಾಟಿದೆ. ಈ ಮಧ್ಯೆ, ಮತ್ತೆ 52 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

"

ಶನಿವಾರ ರಾಜ್ಯದಲ್ಲಿ 1.12 ಲಕ್ಷಕ್ಕೂ ಹೆಚ್ಚು ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದರೂ ಇದರಲ್ಲಿ 4,471 ಸೋಂಕು ಪ್ರಕರಣಗಳು ಮಾತ್ರ ದೃಢಪಟ್ಟಿವೆ. ಸೋಂಕು 5 ಸಾವಿರಕ್ಕಿಂತ ಕೆಳಗೆ ಇಳಿದಿದ್ದು 3 ತಿಂಗಳಲ್ಲೇ ಇದೇ ಮೊದಲು. ಇದರೊಂದಿಗೆ ಪಾಸಿಟಿವಿಟಿ ದರ ಶೇ.3.97ಕ್ಕೆ ಇಳಿಕೆಯಾಗಿದೆ. ಇದೇ ದಿನ ಸೋಂಕಿನಿಂದ ಗುಣಮುಖರಾದ 7,153 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಇದರೊಂದಿಗೆ ರಾಜ್ಯದಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 7,98,378 ತಲುಪಿದರೆ, ಗುಣಮುಖರಾದವರ ಸಂಖ್ಯೆ 7,00,737 ಕ್ಕೇರಿದೆ. ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಚೇತರಿಕೆ ಪ್ರಮಾಣ ಶೇ. 87.77ಕ್ಕೆ ಏರಿಕೆಯಾಗಿದೆ.

ಉಳಿದಂತೆ 86,749 ಸಕ್ರಿಯ ಸೋಂಕಿತರು ರಾಜ್ಯದ ನಾನಾ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ದಾಖಲಾಗಿದ್ದು, ಕೆಲವರು ಲಕ್ಷಣ ರಹಿತ ಸೋಂಕಿತರು ಮನೆ ಆರೈಕೆಗೆ ಒಳಗಾಗಿದ್ದಾರೆ. ಈ ಪೈಕಿ 935 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಮಧ್ಯೆ ಸೋಂಕಿತರ ಪ್ರಮಾಣ ಕಡಿಮೆ ಮತ್ತು ಗುಣಮುಖರ ಪ್ರಮಾಣ ಏರಿಕೆ ನಡುವೆಯೂ ಶನಿವಾರ 52 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 10,873 ಮುಟ್ಟಿದೆ.

ಯಾವ ಜಿಲ್ಲೆ, ಎಷ್ಟು ಸೋಂಕು?:

ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು 2,251 ಮಂದಿಗೆ ಸೋಂಕು ದೃಢಪಟ್ಟಿದೆ. ಉಳಿದಂತೆ ತುಮಕೂರು 232, ಮೈಸೂರು 173, ಮಂಡ್ಯ 163, ದಕ್ಷಿಣ ಕನ್ನಡ, ಹಾಸನ ತಲಾ 136, ಬಳ್ಳಾರಿ 129, ಬೆಂಗಳೂರು ಗ್ರಾಮಾಂತರ 102, ಧಾರವಾಡ 93, ಚಿಕ್ಕಮಗಳೂರು 85, ಚಿತ್ರದುರ್ಗ 84, ಉಡುಪಿ 81, ಶಿವಮೊಗ್ಗ 79, ಚಿಕ್ಕಬಳ್ಳಾಪುರ 78, ಬೆಳಗಾವಿ 73, ಕಲಬುರಗಿ 71, ವಿಜಯಪುರ 62, ಬಾಗಲಕೋಟೆ 57, ದಾವಣಗೆರೆ 52, ಕೊಪ್ಪಳ 49, ಉತ್ತರ ಕನ್ನಡ 48, ಕೋಲಾರ 45, ಚಾಮರಾಜನಗರ 34, ಕೊಡಗು 33, ಹಾವೇರಿ 30, ಯಾದಗಿರಿ 27, ರಾಯಚೂರು 25, ರಾಮನಗರ 22, ಗದಗ 14 ಮತ್ತು ಬೀದರ್‌ನಲ್ಲಿ 7 ಮಂದಿಗೆ ಸೋಂಕು ದೃಢಪಟ್ಟಿದೆ.

15 ಜಿಲ್ಲೆಗಳಲ್ಲಿ ಒಂದೂ ಸಾವಿಲ್ಲ:

ಬೆಂಗಳೂರಿನಲ್ಲಿ ಅತಿ ಹೆಚ್ಚು 26 ಮಂದಿ, ಮೈಸೂರಿನಲ್ಲಿ 6, ಚಾಮರಾನಗರ, ದಕ್ಷಿಣ ಕನ್ನಡದಲ್ಲಿ ತಲಾ ಮೂವರು, ಬಳ್ಳಾರಿ, ಧಾರವಾಡ, ಕೋಲಾರ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾವೇರಿ, ಕಲಬುರಗಿ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಉಳಿದ 15 ಜಿಲ್ಲೆಗಳಲ್ಲಿ ಒಂದೂ ಸಾವು ವರದಿ ಆಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ