KSRTCಯಲ್ಲಿ ಬರುವ ಪ್ರಯಾಣಿಕರಿಗೆ ಕೋವಿಡ್ ರಿಪೋರ್ಟ್ ಕಡ್ಡಾಯ

Kannadaprabha News   | Asianet News
Published : Jun 29, 2021, 09:20 AM IST
KSRTCಯಲ್ಲಿ ಬರುವ ಪ್ರಯಾಣಿಕರಿಗೆ ಕೋವಿಡ್ ರಿಪೋರ್ಟ್  ಕಡ್ಡಾಯ

ಸಾರಾಂಶ

ಮಹಾರಾಷ್ಟ್ರದಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೋವಿಡ್ ರಿಪೋರ್ಟ್ ಕಡ್ಡಾಯ ದಟ್ಟಣೆಗೆ ಅನುಗುಣವಾಗಿ ನಾಲ್ಕೈದು ಬಸ್‌ಗಳು ಮಹಾರಾಷ್ಟಕ್ಕೆ ಸಂಚಾರ ಮಹಾರಾಷ್ಟದಲ್ಲಿ ಹೆಚ್ಚಾಗಿರುವ ಸೋಂಕಿನ ಪ್ರಮಾಣ

ಬೆಂಗಳೂರು (ಜೂ.29) :  ಮಹಾರಾಷ್ಟ್ರದಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ರಾಜ್ಯಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್‌ ವರದಿ ತರಬೇಕು. ಇಲ್ಲವಾದರೆ, ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡದಂತೆ ಕೆಎಸ್‌ಆರ್‌ಟಿಸಿ ತನ್ನ ಚಾಲನಾ ಸಿಬ್ಬಂದಿಗೆ ಸೂಚನೆ ನೀಡಿದೆ.

ಅನ್‌ಲಾಕ್‌ ಬಳಿಕ ಬೆಂಗಳೂರು ಸೇರಿದಂತೆ ನಿಗಮದ ವ್ಯಾಪ್ತಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನಾಲ್ಕೈದು ಬಸ್‌ಗಳು ಮಹಾರಾಷ್ಟಕ್ಕೆ ಸಂಚರಿಸುತ್ತಿವೆ. ಮಹಾರಾಷ್ಟದಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದೆ, ಅಲ್ಲದೇ ಡೆಲ್ಟಾಪ್ಲಸ್‌ ಪ್ರಕರಣ ಕೂಡಾ ಜಾಸ್ತಿ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಮಹಾರಾಷ್ಟ್ರದಿಂದ ನಿಗಮದ ಬಸ್‌ಗಳಲ್ಲಿ ರಾಜ್ಯಕ್ಕೆ ಬರುವ ಪ್ರಯಾಣಿಕರು ಕೋವಿಡ್‌ ವರದಿ ತರುವುದನ್ನು ಕಡ್ಡಾಯಗೊಳಿಸಲಾಗಿದೆ.

ಡೆಲ್ಟಾ ಭೀತಿ: ರಾಜ್ಯದ ಗಡಿಭಾಗದಲ್ಲಿ ಕಟ್ಟೆಚ್ಚರ, ಪ್ರಯಾಣಿಕರ ಮೇಲೆ ನಿಗಾ: ಡಾ. ಸುಧಾಕರ್ ...

 ಈ ನಡುವೆ ರಾಜ್ಯ ಸರ್ಕಾರ ಕೊರೋನಾ ಲಸಿಕೆ ಮೊದಲ ಡೋಸ್‌ ಪಡೆದ ಪ್ರಯಾಣಿಕರಿಗೂ ಬಸ್‌ಗಳಲ್ಲಿ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚಿಸುತ್ತಿದೆ. ಸದ್ಯಕ್ಕೆ ಕೋವಿಡ್‌ ವರದಿ ತರುವ ಪ್ರಯಾಣಿಕರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡುವುದಾಗಿ ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ