
ಹುನಗುಂದ: ಕೂಡಲಸಂಗಮದ ವಿಶ್ವಗುರು ಬಸವಣ್ಣನವರ ಐಕ್ಯ ಮಂಟಪದಲ್ಲಿರುವ ಲಿಂಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಭಕ್ತರು ಎಸೆಯುವ ನಾಣ್ಯದಿಂದ ಈ ಬಿರುಕು ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.
ಕೃಷ್ಣಾ-ಮಲಪ್ರಭಾ ನದಿಗಳ ಸಂಗಮದಲ್ಲಿರುವ ಬಸವಣ್ಣನವರ ಐಕ್ಯ ಮಂಟಪದ ದರ್ಶನಕ್ಕೆ ದೇಶ, ವಿದೇಶದಿಂದ ನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಬರುವ ಭಕ್ತರೆಲ್ಲರೂ ಐಕ್ಯ ಮಂಟಪದಲ್ಲಿನ ಲಿಂಗಕ್ಕೆ ನಾಣ್ಯ ಎಸೆಯುತ್ತಾರೆ.
ಇದರಿಂದ ಅದಕ್ಕೆ ಧಕ್ಕೆಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಹೀಗಾಗಿ ಭಕ್ತರು ನಾಣ್ಯ ಎಸೆಯುವುದನ್ನು ಕೂಡಲಸಂಗಮ ಅಭಿವೃದ್ಧಿ ಮಂಡಳಿ ತಡೆಯಬೇಕೆಂದು ಆಗ್ರಹಿಸಲಾಗಿದೆ. ಕಾಣಿಕೆಯನ್ನು ಹುಂಡಿಯಲ್ಲಿ ಹಾಕಿ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿ ಫಲಕ ಹಾಕಿದೆ.
ಆದರೆ, ಇದನ್ನು ಗಮನಿಸಿದ ಎಲ್ಲ ಭಕ್ತರು ಲಿಂಗದ ಮೇಲೆಯೇ ನಾಣ್ಯ ಎಸೆಯುತ್ತಿರುವುದ ಸಾಮಾನ್ಯವಾಗಿ ಬಿಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ