ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರು; ಪಬ್ಲಿಕ್‌ನಲ್ಲಿ ಸ್ಕ್ರೀನಿಂಗ್ ಅಳವಡಿಸಲು ಪೊಲೀಸ್ ಅನುಮತಿ ಕಡ್ಡಾಯ!

Published : Nov 18, 2023, 03:33 PM ISTUpdated : Nov 18, 2023, 03:35 PM IST
ಭಾರತ-ಆಸ್ಟ್ರೇಲಿಯಾ  ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರು; ಪಬ್ಲಿಕ್‌ನಲ್ಲಿ ಸ್ಕ್ರೀನಿಂಗ್ ಅಳವಡಿಸಲು ಪೊಲೀಸ್ ಅನುಮತಿ ಕಡ್ಡಾಯ!

ಸಾರಾಂಶ

ನಾಳೆ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯ ರೋಚಕವಾಗಿರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸ್ಕ್ರೀನ್ ಅಳವಡಿಸುವುದಕ್ಕೆ ಪೊಲೀಸ್ ಅನುಮತಿ ಕಡ್ಡಾಯವಾಗಿದೆ. ಈ ಬಗ್ಗೆ ಎಲ್ಲ ಪೊಲೀಸ್ ಠಾಣೆಗಳಿಗೆ ನಗರ ಪೊಲೀಸ್ ಆಯುಕ್ತರು ಮೌಖಿಕ ಸೂಚನೆ ನೀಡಿದ್ದಾರೆ.

ಬೆಂಗಳೂರು (ನ.18) ನಾಳೆ ಭಾನುವಾರ(ನ.19) ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಯಲಿರುವ ಹಿನ್ನೆಲೆ ನಗರದ ಬಹುತೇಕ ಕ್ಲಬ್ ಗಳಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. 

ನಗರದ ಬೌರಿಂಗ್ ಕ್ಲಬ್ ನಲ್ಲಿ ಬಿಗ್ ಸ್ಕ್ರೀನ್ ಹಾಕಲಾಗಿದೆ. ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿ ಶುರುವಾದಾಗಿನಿಂದ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಏಕಕಾಲಕ್ಕೆ 1000ಕ್ಕೂ ಹೆಚ್ಚು ಮಂದಿ ಕುಳಿತು ವೀಕ್ಷಿಸಬಹುದಾದಷ್ಟ ಆಸನದ ವ್ಯವಸ್ಥೆ ಇದೆ. ಕ್ಲಬ್ ಸದಸ್ಯರು, ಅವರ ಕುಟುಂಬದ ಸದಸ್ಯರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

ಭಾರತ ತಂಡದ ಗೆಲುವಿಗೆ ದರ್ಗಾದಲ್ಲಿ ಮುಸ್ಲಿಂ ಬಾಂಧವರ ವಿಶೇಷ ಪ್ರಾರ್ಥನೆ; ಇತ್ತ ಆರ್‌ಆರ್‌ ನಗರದ ಅರ್ಚಕರಿಂದ ಚಂಡಿಕಾ ಹೋಮ!

ಸಾರ್ವಜನಿಕ ಸ್ಥಳದಲ್ಲಿ ಸ್ಕ್ರೀನ್ ಅಳವಡಿಕೆಗೆ ಅನುಮತಿ ಕಡ್ಡಾಯ:

ನಾಳೆ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯ ರೋಚಕವಾಗಿರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸ್ಕ್ರೀನ್ ಅಳವಡಿಸುವುದಕ್ಕೆ ಪೊಲೀಸ್ ಅನುಮತಿ ಕಡ್ಡಾಯವಾಗಿದೆ. ಈ ಬಗ್ಗೆ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿರುವ ನಗರ ಪೊಲೀಸ್ ಆಯುಕ್ತರು, ಸಾರ್ವಜನಿಕ ಸ್ಥಳ, ಮೈದಾನಗಳಲ್ಲಿ ಸ್ಕ್ರೀನ್ ಅಳವಡಿಕೆ ಮುನ್ನ ಪಬ್ಲಿಕ್ ಆಕ್ಟಿವಿಟಿ ಅಡಿಯಲ್ಲಿ ಕಡ್ಡಾಯವಾಗಿ ಪೊಲೀಸರ ಅನುಮತಿ ಪಡೆದಿರಬೇಕು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ. ಈಗಾಗಲೇ ಎಲ್ಲಾ ಪೊಲೀಸ್ ಠಾಣೆಗಳಿಗೂ ಮೌಖಿಕವಾಗಿ ಸೂಚಿಸಿದ ನಗರ ಪೊಲೀಸ್ ಆಯುಕ್ತರು.

ಕೊಹ್ಲಿ, ರೋಹಿತ್, ರಾಹುಲ್ ಯಶಸ್ಸಿನ ಹಿಂದೆ ಕುಮಟಾ ಯುವಕ; 4 ವರ್ಷ ಸ್ಮಶಾನದಲ್ಲಿ ಮಲಗಿದ್ದವನೇ ಟೀಂ ಇಂಡಿಯಾದ ಅಸಲಿ ಬೆನ್ನೆಲುಬು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್