
ಬೆಂಗಳೂರು (ಅ.21) : ಎಂ.ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ಮಧ್ಯಾಹ್ನ ನೀಡಿದ್ದ ಮೊಸರನ್ನದಲ್ಲಿ ಹುಳ ಪತ್ತೆಯಾಗಿದೆ.
ಮೊಸರನ್ನದಲ್ಲಿ ಹುಳ ಇರುವ ಪೋಟೊ ಪೊಲೀಸರ ವಾಟ್ಸಾಪ್ ಗ್ರೂಪ್ಗಳಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರಿಗೆ ಹುಳ ಇರುವ ಆಹಾರ ನೀಡಿದವರ ವಿರುದ್ಧ ಸಾರ್ವಜನಿಕರು ಅಸಮಧಾನ ಹೊರಹಾಕಿದ್ದಾರೆ.
ಇತ್ತೀಚೆಗಷ್ಟೇ ಬೆಂಗಳೂರು ಬಂದ್ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಿದ್ದ ರೈಸ್ ಬಾತ್ನಲ್ಲಿ ಸತ್ತ ಇಲಿ ಪತ್ತೆಯಾಗಿತ್ತು. ಅದೃಷ್ಟವಶಾತ್ ಪೊಲೀಸರು ಆ ಬಾತ್ ಸೇವನೆಗೂ ಮುನ್ನ ಪೊಲೀಸರೊಬ್ಬರು ಬಾತ್ನಲ್ಲಿ ಇಲಿ ಇರುವ ವಿಚಾರವನ್ನು ಪೊಲೀಸರ ಗ್ರೂಪ್ನಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ಭಾರೀ ಅನಾಹುತ ತಪ್ಪಿತ್ತು. ಇದೀಗ ಮತ್ತೊಮ್ಮೆ ಪೊಲೀಸರಿಗೆ ನೀಡಲಾದ ಆಹಾರದಲ್ಲಿ ಹುಳ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ ಆಸಿಸ್-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ; ಕ್ರೀಡಾಂಗಣದ ಸುತ್ತಲೂ ಪೊಲೀಸ್ ಸರ್ಪಗಾವಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ