
ಕಾರವಾರ, ಉತ್ತರಕನ್ನಡ (ಅ.26): ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಳೇ ದಾಂಡೇಲಿ ಪ್ರದೇಶದಲ್ಲಿ ಮತ್ತೊಮ್ಮೆ ಮೊಸಳೆಯ ಪ್ರತ್ಯಕ್ಷವಾಗಿದೆ. ಬೃಹತ್ ಮೊಸಳೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಕಾಳಿ ನದಿಯಲ್ಲಿ ಮೊಸಳೆಗಳಿಂದ ರಕ್ಷಣೆಗಾಗಿ ಅರಣ್ಯ ಇಲಾಖೆ ಮತ್ತು ದಾಂಡೇಲಿ ನಗರಾಡಳಿತ ಹಾಕಿದ್ದ ತಂತಿ ಬೇಲಿಯನ್ನು ಲೆಕ್ಕಿಸದೇ ದಾಟಿ ಬಂದ ಬೃಹತ್ ಗಾತ್ರದ ಮೊಸಳೆ, ಬಟ್ಟೆ ಒಗೆಯುವ ಸ್ಥಳದಲ್ಲಿ ಕೊಂಚ ಹೊತ್ತು ವಿಶ್ರಾಂತಿ ಪಡೆದು ವಾಪಸ್ ಆಗಿದೆ. ಈ ದೃಶ್ಯ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಹಳೇ ದಾಂಡೇಲಿಯ ನಿವಾಸಿಯೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದ ಈ ಭಯಾನಕ ದೃಶ್ಯಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ! ವಿಡಿಯೋದಲ್ಲಿ ಮೊಸಳೆ ಬೇಲಿ ದಾಟಿ ದಡದಲ್ಲಿ ಆರಾಮವಾಗಿ ಮಲಗಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಕೆಲವು ಕ್ಷಣಗಳ ನಂತರ ಅದು ತನ್ನಷ್ಟಕ್ಕೇ ಬೇಲಿ ನಡುವೆ ಮತ್ತೆ ನದಿಗೆ ಹಿಂದಿರುಗಿದೆ ಎಂದು ತಿಳಿದುಬಂದಿದೆ.
ಅರಣ್ಯ ಇಲಾಖೆ ಹಾಕಿದ್ದ ಬೇಲಿಯನ್ನು ಮೊಸಳೆ ಇಷ್ಟು ಸುಲಭವಾಗಿ ದಾಟಿರುವುದು ಸಾರ್ವಜನಿಕರ ಸುರಕ್ಷತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ. 'ಇದು ಎಷ್ಟು ಸುರಕ್ಷಿತ? ಮುಂದೆ ಇದೇ ರೀತಿ ಸಾರ್ವಜನಿಕ ಪ್ರದೇಶಗಳಿಗೆ ನುಗ್ಗಿದರೆ ಏನು ಮಾಡುವುದು? ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ