ಕೊರೋನಾ ಕಾಟ: ಬೆಂಗಳೂರಲ್ಲಿ 40000 ದಾಟಿದ ಸಕ್ರಿಯ ಕೇಸ್‌

Kannadaprabha News   | Asianet News
Published : Sep 04, 2020, 09:52 AM IST
ಕೊರೋನಾ ಕಾಟ: ಬೆಂಗಳೂರಲ್ಲಿ 40000 ದಾಟಿದ ಸಕ್ರಿಯ ಕೇಸ್‌

ಸಾರಾಂಶ

ಬೆಂಗಳೂರಲ್ಲಿ ಗುರುವಾರ 3189 ಹೊಸ ಕೇಸ್‌| 2631 ಮಂದಿ ಗುಣಮುಖ| ಕಳೆದ 24 ಗಂಟೆಗಳ ಅವಧಿಯಲ್ಲಿ 17 ಮಂದಿ ಪುರುಷರು ಹಾಗೂ 12 ಮಂದಿ ಮಹಿಳೆಯರು ಸೇರಿ ಒಟ್ಟು 29 ಮಂದಿ ಸಾವು| ಮೃತರ ಪೈಕಿ ಬಹುತೇಕರು 50 ವರ್ಷ ಮೀರಿದವರೇ ಆಗಿದ್ದಾರೆ| 

ಬೆಂಗಳೂರು(ಸೆ.04):ರಾಜಧಾನಿಯಲ್ಲಿ ಕಳೆದ 24 ತಾಸಿನಲ್ಲಿ 3,189 ಹೊಸ ಕೊರೋನಾ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40 ಸಾವಿರ ಗಡಿ ದಾಟಿದೆ.

ಆರೋಗ್ಯ ಇಲಾಖೆ ಗುರುವಾರ ಹೊರಡಿಸಿರುವ ಕೋವಿಡ್‌ ವರದಿಯಲ್ಲಿ ನಗರದಲ್ಲಿ 3,189 ಹೊಸ ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,38,701ಕ್ಕೆ ಏರಿಕೆಯಾಗಿದೆ. ಇದೇ ವೇಳೆ 2,631 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 96,194 ಜನರು ಗುಣಮುಖರಾಗಿದ್ದಾರೆ. ಇನ್ನು ನಗರದಲ್ಲಿ 40,440 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 276 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಡ್ ನ್ಯೂಸ್ : ಉಡುಪಿ ಜಿಲ್ಲೆ ಆಗುತ್ತಿದೆ ಕೊರೋನಾ ಮುಕ್ತ

29 ಸಾವು:

ಕಳೆದ 24 ಗಂಟೆಗಳ ಅವಧಿಯಲ್ಲಿ 17 ಮಂದಿ ಪುರುಷರು ಹಾಗೂ 12 ಮಂದಿ ಮಹಿಳೆಯರು ಸೇರಿ ಒಟ್ಟು 29 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ನಗರದಲ್ಲಿ ಈವರೆಗೆ ನಗರದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 2,066ಕ್ಕೆ ಏರಿಕೆಯಾಗಿದೆ. ಮೃತರ ಪೈಕಿ ಬಹುತೇಕರು 50 ವರ್ಷ ಮೀರಿದವರೇ ಆಗಿದ್ದಾರೆ.

ಪಶ್ಚಿಮ ವಲಯದಲ್ಲಿ ಅತಿ ಹೆಚ್ಚು ಕಂಟೈನ್ಮೆಂಟ್‌ ಪ್ರದೇಶ

ಬಿಬಿಎಂಪಿ ಎಂಟು ವಲಯಗಳಲ್ಲಿ ಒಟ್ಟು 13,645 ಸೋಂಕು ಸಕ್ರಿಯ ಕಂಟೈನ್ಮೆಂಟ್‌ ಪ್ರದೇಶಗಳಿವೆ. ಈ ಪೈಕಿ ಅತಿ ಹೆಚ್ಚು ಪಶ್ಚಿಮ ವಲಯ 3,032, ಪೂರ್ವ 2,685, ದಕ್ಷಿಣ 2,596, ರಾಜರಾಜೇಶ್ವರಿನಗರ ವಲಯ 1,539, ಮಹದೇವಪುರ ವಲಯ 1,242, ಬೊಮ್ಮನಹಳ್ಳಿ ವಲಯ 1,048, ದಾಸರಹಳ್ಳಿ ವಲಯ 991 ಹಾಗೂ ಯಲಹಂಕ ವಲಯದಲ್ಲಿ 512 ಕಂಟೈನ್ಮೆಂಟ್‌ ಪ್ರದೇಶಗಳಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌