
ಧಾರವಾಡ(ಅ.24): ಸಾವರ್ಕರ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸತ್ಯ ಗೊತ್ತಾಗಬೇಕಿದ್ದು ಕೂಡಲೇ ಅವರು ಸಾವರ್ಕರ್ ಅವರ ಆತ್ಮಕಥನವಾದ ‘ಆತ್ಮಾಹುತಿ’ ಓದಬೇಕು. ಆತ್ಮಕಥನ ಓದಿ, ಸಾವರ್ಕರ್ ಯಾವ ಕಾರಣಕ್ಕಾಗಿ ಅಭಿನವ ಭಾರತ ಸಂಘಟನೆ ಕಟ್ಟಿದರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ಸಿದ್ದರಾಮಯ್ಯನವರಿಗೆ ‘ಆತ್ಮಾಹುತಿ’ ಪುಸ್ತಕ ಕಳುಹಿಸಿ ಕೊಡುತ್ತೇನೆ. ಸಾವರ್ಕರ್ ಬಗ್ಗೆ ಚರ್ಚೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.
ಧಾರವಾಡ: ಪ್ರವಾಸೋದ್ಯಮ ನೀತಿ ರೂಪಿಸಲು ಚಿಂತನೆ
ಸಾವರ್ಕರ್ಗೆ ಉಗಿದರೆ ಅದು ಅವರ ಮುಖಕ್ಕೆ ತಾವೇ ಉಗಿದುಕೊಂಡಂತಾಗುತ್ತದೆ. ಇವರು ಸಾವರ್ಕರ್ ಬಗ್ಗೆ ಮಾತನಾಡಿ ತಮಗೆ ತಾವೇ ಅಪಮಾನ ಮಾಡಿಕೊಳ್ಳುತ್ತಿದ್ದಾರೆ. ಗಾಂಧೀಜಿ ಮೇಲೆ ಗೋಡ್ಸೆ ಗುಂಡು ಹಾರಿಸಿರುವುದು ಸತ್ಯ. ಆದರೆ, ಗಾಂಧೀಜಿಯನ್ನು ಜನಮಾನಸದಿಂದ ದೂರ ಮಾಡಿದವರು ಯಾರು? ಈ ಬಗ್ಗೆಯೂ ಚರ್ಚೆ ಆಗಬೇಕಿದೆ ಎಂದಿದ್ದಾರೆ.
ಯಾವ ಕಾಂಗ್ರೆಸ್ಸಿಗರು ಗಾಂಧೀಜಿಯವರ ಹೆಸರು ಇಟ್ಟುಕೊಂಡಿದ್ದಾರೋ ಅವರೇ ಗಾಂಧೀಜಿ ತತ್ವಗಳ ಅಡಿ ಬದುಕುತ್ತಿದ್ದಾರಾ? ಎಂಬುದು ಸಹ ಚರ್ಚೆಯಾಗಬೇಕು. ಗಾಂಧೀಜಿಯವರ ಪಕ್ಷ ನಮ್ಮದು ಎಂದು ಗಾಂಧೀಜಿಯ ರಾಜಕೀಯ ವಾರಸುದಾರರು ಎಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರು ನಿಜಕ್ಕೂ ಅವರ ತತ್ವದ ವಾರಸುದಾರರೇ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ