
ವಿಧಾನಪರಿಷತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಬಜೆಟ್ ಖಾಲಿ ಚೊಂಬಿನ ಬಜೆಟ್ನಂತಿದ್ದು, ಸಾಲದ ಮೇಲೆ ಎಲ್ಲವನ್ನೂ ಮಾಡಲಾಗಿದೆ ಎಂದು ಬಿಜೆಪಿಯ ಸಿ.ಟಿ.ರವಿ ಆರೋಪಿಸಿದರು.
ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಿ.ಟಿ.ರವಿ, ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಮಾಡುತ್ತಿರುವ ಸಾಲದ ಬಗ್ಗೆ ಜನರೂ ಮಾತನಾಡುತ್ತಿದ್ದಾರೆ. ಇನ್ನು ಕಳೆದ ಬಾರಿಯ ಬಜೆಟ್ ಅನುಷ್ಠಾನ ಗಮನಿಸಿದರೆ ಶೇ.60ರಷ್ಟು ಮಾತ್ರ ಅನುದಾನ ಬಳಕೆಯಾಗಿದೆ. ಇನ್ನೂ 1.31 ಲಕ್ಷ ಕೋಟಿ ರು. ಮೀಸಲಿಟ್ಟ ಅನುದಾನ ಖರ್ಚು ಮಾಡಬೇಕಿದೆ. ಅಷ್ಟು ಮೊತ್ತ ಬಳಕೆ ಮಾಡಬೇಕೆಂದರೆ ಸುಳ್ಳು ಲೆಕ್ಕ ಬರೆಯಬೇಕಾಗುತ್ತದೆ. ಅಲ್ಲದೆ, ಕಳೆದ ಜನವರಿವರೆಗೆ 2.44 ಲಕ್ಷ ಕೋಟಿ ರು. ಮಾತ್ರ ಬಿಡುಗಡೆಯಾಗಿದ್ದು, ಅದರಲ್ಲೂ 35 ಸಾವಿರ ಕೋಟಿ ರು. ವೆಚ್ಚವಾಗಿಲ್ಲ. ಅಲ್ಲದೆ, ಆದಾಯ ಸಂಗ್ರಹದಲ್ಲೂ ಭಾರೀ ಕುಸಿತ ಕಂಡಿದೆ ಎಂದರು.
ರೈತರ ಆತ್ಮಹತ್ಯೆ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ರೈತರ ಆತ್ಮಹತ್ಯೆಗೆ ಏನು ಕಾರಣ ಎಂದು ತಿಳಿದು, ಅದಕ್ಕೆ ಪರಿಹಾರ ಕಂಡುಕೊಳ್ಳುವ ಕೆಲಸ ಸರ್ಕಾರ ಮಾಡಿಲ್ಲ. ಇನ್ನು ಸರ್ಕಾರ ಜಾರಿಗೆ ತಂದಿರುವ ಹಲವು ಯೋಜನೆಗಳು ಸರ್ಕಾರಿ ಸಂಸ್ಥೆಗಳನ್ನು ನಿಶ್ಯಕ್ತಿಗೊಳಿಸಿವೆ. ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಲಾಗಿದ್ದು, ಪ್ರಸಕ್ತ ವರ್ಷದಲ್ಲಿ 50 ಸಾವಿರ ಕೋಟಿ ರು.ಗಳನ್ನು ಬಡ್ಡಿ ರೂಪದಲ್ಲಿ ಪಾವತಿಸಬೇಕಿದೆ ಎಂದು ತಿಳಿಸಿದರು.
ಕಾಂಗ್ರೆಸ್ನ ರಮೇಶ್ ಬಾಬು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಿದ ಕೊಡ ಇದ್ದ ಹಾಗೆ. ಅದಕ್ಕೆ ತಕ್ಕಂತೆ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ರಾಜ್ಯ ಸರ್ಕಾರದ ಸಾಲದ ಬಗ್ಗೆ ಟೀಕಿಸುವ ವಿರೋಧ ಪಕ್ಷದ ನಾಯಕರು ಕೇಂದ್ರ ಸರ್ಕಾರ ಮಾಡಿರುವ ಸಾಲವನ್ನೂ ನೋಡಲಿ. ಸದ್ಯ 200 ಲಕ್ಷ ಕೋಟಿ ರು.ಗೂ ಹೆಚ್ಚಿನ ಸಾಲವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ