ಭಯೋತ್ಪಾದಕ ಕೃತ್ಯಗಳ ಹಿಂದೆ ಮೌಲ್ವಿಗಳ ಕೈವಾಡ, ಅವರ ಬಗ್ಗೆ ತನಿಖೆ ನಡೆಸಬೇಕು: ಸಿ.ಟಿ. ರವಿ

Published : Apr 22, 2022, 04:39 AM IST
ಭಯೋತ್ಪಾದಕ ಕೃತ್ಯಗಳ ಹಿಂದೆ ಮೌಲ್ವಿಗಳ ಕೈವಾಡ, ಅವರ ಬಗ್ಗೆ ತನಿಖೆ ನಡೆಸಬೇಕು: ಸಿ.ಟಿ. ರವಿ

ಸಾರಾಂಶ

* ಮೌಲ್ವಿಗಳ ಸಮೀಕ್ಷೆ: ಬೆಲ್ಲದ್‌ ಹೇಳಿಕೆಗೆ ಸಿ.ಟಿ. ರವಿ ಬೆಂಬಲ * ಉಗ್ರಗಾಮಿ ಕೃತ್ಯದಲ್ಲಿ ಕೈವಾಡ ಇದೆ, ತನಿಖೆಯಾಗಲಿ: ಬಿಜೆಪಿ ನಾಯಕ * ನಿರ್ದೋಷಿಯಾಗಿದ್ದರೆ ಹೊರಬರುತ್ತಾರೆ, ತನಿಖೆಯೇ ತಪ್ಪೆಂದರೆ ಹೇಗೆ?

ಬೆಂಗಳೂರು(ಏ.22): ದೇಶದ ಉದ್ದಗಲಕ್ಕೆ ನಡೆದ ಹಲವು ಭಯೋತ್ಪಾದಕ ಕೃತ್ಯಗಳ ಹಿಂದೆ ಮೌಲ್ವಿಗಳ ಕೈವಾಡ ಕಂಡು ಬಂದಿರುವುದರಿಂದ ಅವರ ಬಗ್ಗೆ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪರೋಕ್ಷವಾಗಿ ಆಗ್ರಹಿಸಿದ್ದಾರೆ. ತನ್ಮೂಲಕ ಹುಬ್ಬಳ್ಳಿ ಗಲಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಅವರು ಮೌಲ್ವಿಗಳ ಸಮೀಕ್ಷೆ ನಡೆಯಬೇಕು ಎಂದು ಆಗ್ರಹಿಸಿದ್ದಕ್ಕೆ ಬೆಂಬಲ ನೀಡಿದ್ದಾರೆ.

ಪಕ್ಷದ ಸಂಘಟನೆ ಸಲುವಾಗಿ ಪ್ರವಾಸ ಕೈಗೊಂಡಿರುವ ಅವರು ಗುರುವಾರ ದೇವನಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಗೂ ಮುನ್ನ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಹುಬ್ಬಳ್ಳಿ ಗಲಭೆ ಹಿಂದೆ ಒಬ್ಬ ಮೌಲ್ವಿಯ ಕೈವಾಡವಿದೆ ಎಂಬ ಮಾಹಿತಿ ಬಂದಿದ್ದು, ತನಿಖೆ ನಡೆಯುತ್ತಿದೆ. ಯಾರೂ ಸಹ ಸಂವಿಧಾನಾತೀತರಲ್ಲ. ಯಾರೂ ಸಹ ಕಾನೂನಿಗೆ ಅತೀತರಲ್ಲ. ದೇಶದ ಉದ್ದಗಲಕ್ಕೆ ನಡೆದ ಹಲವು ಭಯೋತ್ಪಾದಕ ಕೃತ್ಯಗಳ ಹಿಂದೆ ಮೌಲ್ವಿಗಳ ಕೈವಾಡ ಕಂಡುಬಂದಿದೆ. ತನಿಖೆ ಮಾಡಬಾರದೇನು? ನಿರ್ದೋಷಿಯಾಗಿದ್ದರೆ ಹೊರಬರುತ್ತಾರೆ. ಆದರೆ, ತನಿಖೆಯೇ ತಪ್ಪೆಂದರೆ ಹೇಗೆ ಎಂದು ಪ್ರಶ್ನಿಸಿದರು.

ನೆಲದ ಕಾನೂನು ಎಲ್ಲರಿಗೂ ಒಂದೇ:

ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ವಿಶೇಷ ಅನುಮತಿ ಇಲ್ಲದೆ ಯಾರೂ ಮೈಕ್‌ ಹಾಕುವಂತಿಲ್ಲ. ಅದನ್ನು ಎಲ್ಲರೂ ಪಾಲಿಸಲೇಬೇಕು ಎಂದು ಇದೇ ವೇಳೆ ರವಿ ಹೇಳಿದರು.

ನಿಗದಿತ ಡೆಸಿಬಲ್‌ ಮಟ್ಟವನ್ನು ಕಾಪಾಡುವ ಮತ್ತು ಅಂತಹ ಸೂಚನೆಯನ್ನು ಪಾಲಿಸುವಂತೆ ಮಾಡುವ ಜವಾಬ್ದಾರಿ ಅಧಿಕಾರಿಗಳಿಗೆ ಇದೆ. ಅದು ಅನುಷ್ಠಾನಗೊಳುವಂತೆ ಸರ್ಕಾರ ಮಾಡಬೇಕು. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಯಾರೂ ಮೈಕ್‌ ಹಾಕುವಂತಿಲ್ಲ ಎಂದು ಕಾನೂನಿನಲ್ಲಿದೆ. ವಿಶೇಷ ಸಂದರ್ಭದಲ್ಲಿ ಮಾತ್ರ ಅವಕಾಶ ಇದೆ. ಕಾನೂನನ್ನು ಎಲ್ಲರೂ ಪಾಲಿಸಲೇಬೇಕು ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್‌ನವರು ಕೆಲವರನ್ನು ತಲೆ ಮೇಲೆ ಕೂರಿಸಿಕೊಂಡಿರಬಹುದು. ನಾವು ಯಾರನ್ನೂ ತಲೆ ಮೇಲೆ ಕೂರಿಸಿಕೊಂಡಿಲ್ಲ, ಕೂರಿಸಿಕೊಳ್ಳುವುದೂ ಇಲ್ಲ. ಭಯೋತ್ಪಾದಕರ ಮುಖವಾಡ ಕಳಚಿಬಿದ್ದೇ ಬೀಳುತ್ತದೆ. ಕಳ್ಳನ ಹೆಂಡತಿ ಡ್ಯಾಶ್‌..ಡ್ಯಾಶ್‌.. ಎಂಬುದು ನಿಜವಾಗಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!