ಬೇಡಿಕೆ ಇಡುವ ಮೊದಲೇ ನೀರು ಬಿಟ್ಟಿದ್ದೇಕೆ, ಕಾಂಗ್ರೆಸ್‌ ಸರ್ಕಾರಕ್ಕೆ ಬೆದರಿಕೆ ಇತ್ತೇ?: ಸಿ.ಟಿ. ರವಿ

Published : Sep 22, 2023, 04:31 AM IST
ಬೇಡಿಕೆ ಇಡುವ ಮೊದಲೇ ನೀರು ಬಿಟ್ಟಿದ್ದೇಕೆ, ಕಾಂಗ್ರೆಸ್‌ ಸರ್ಕಾರಕ್ಕೆ ಬೆದರಿಕೆ ಇತ್ತೇ?: ಸಿ.ಟಿ. ರವಿ

ಸಾರಾಂಶ

ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ, ಸಂಸದರ ಸಭೆ ನಡೆಸಿದ್ದು ಸರಿಯಲ್ಲ. ರಾಜ್ಯದ ರೈತರ ಸಂಕಷ್ಟ ದೂರ ಮಾಡುವುದರ ಬದಲು ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಲಾಭ ಪಡೆಯುವ ಪ್ರಯತ್ನ ಇದ್ದಂತಿದೆ. ಇದಕ್ಕೆ ಕರ್ನಾಟಕ ಬಲಿಪಶು ಆಗಿದೆ ಎಂದು ಅಭಿಪ್ರಾಯಪಟ್ಟ ಸಿ.ಟಿ. ರವಿ 

ಬೆಂಗಳೂರು(ಸೆ.22): ತಮಿಳುನಾಡಿಗೆ ಮುಂಚಿತವಾಗಿಯೇ ನೀರು ಬಿಡಲು ನಿಮಗೇನಾದರೂ ಬೆದರಿಕೆ ಇತ್ತೇ? ನಿಮ್ಮ ಪಕ್ಷದಿಂದ ಒತ್ತಡ ಇತ್ತೇ? ಬೇಡಿಕೆ ಇಡುವ ಮೊದಲೇ ನೀರು ಬಿಟ್ಟಿದ್ದು ಯಾಕೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಟಿ. ರವಿ ರಾಜ್ಯ ಸರ್ಕಾರವನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದ ಭಾಗವಾಗಲು ನೀರು ಬಿಡಿ ಎಂದು ಡಿಎಂಕೆ ಬೆದರಿಕೆ ಹಾಕಿರಬಹುದು. ಇಲ್ಲವೇ ಕಾಂಗ್ರೆಸ್ ಹೈಕಮಾಂಡ್ ಒತ್ತಡ ಹಾಕಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಕರ್ನಾಟಕಕ್ಕೆ ಮತ್ತೆ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್‌! ಪ್ರತಿದಿನ 5000 ಕ್ಯೂಸೆಕ್ಸ್‌ ಕಾವೇರಿ ನೀರು ಬಿಡಲು ಆದೇಶ

ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ, ಸಂಸದರ ಸಭೆ ನಡೆಸಿದ್ದು ಸರಿಯಲ್ಲ. ರಾಜ್ಯದ ರೈತರ ಸಂಕಷ್ಟ ದೂರ ಮಾಡುವುದರ ಬದಲು ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಲಾಭ ಪಡೆಯುವ ಪ್ರಯತ್ನ ಇದ್ದಂತಿದೆ. ಇದಕ್ಕೆ ಕರ್ನಾಟಕ ಬಲಿಪಶು ಆಗಿದೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಸರ್ಕಾರವು ಕಾವೇರಿ ನೀರಿನ ವಿಷಯದಲ್ಲಿ ಆರಂಭದಿಂದಲೂ ಅನುಮಾನಾಸ್ಪದವಾಗಿ ನಡೆದುಕೊಂಡಿದೆ. ಅದರ ಪರಿಣಾಮವಾಗಿ ನಮ್ಮ ವಿರುದ್ಧ ತೀರ್ಪು ಬಂದಿದೆ. ವಾಸ್ತವಿಕ ಸ್ಥಿತಿಯನ್ನು ಸುಪ್ರೀಂಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ನಾವು ವಿಫಲವಾಗಿದ್ದೇವೆ ಎಂದು ರವಿ ತಿಳಿಸಿದರು.

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತಮಿಳುನಾಡು ಬೇಡಿಕೆ ಮುಂದಿಡುವುದಕ್ಕಿಂತ ಮುಂಚಿತವಾಗಿಯೇ ನೀರು ಬಿಡುವ ಮೂಲಕ ತಮ್ಮ ಉದಾರತೆಯನ್ನು ಪ್ರದರ್ಶನ ಮಾಡಿತ್ತು. ಅದರ ಪರಿಣಾಮವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.42ರಷ್ಟು ನೀರಿನ ಕೊರತೆ ಇದ್ದರೂ ನೀರು ಬಿಟ್ಟಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!