ಅರ್ಜುನ್‌ ಸರ್ಜಾಗೆ ಪೊಲೀಸ್ ಬುಲಾವ್

Published : Nov 05, 2018, 07:54 AM IST
ಅರ್ಜುನ್‌ ಸರ್ಜಾಗೆ ಪೊಲೀಸ್ ಬುಲಾವ್

ಸಾರಾಂಶ

ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ್ದ ಲೈಂಗಿಕ  ಕಿರಕುಕುಳ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಅರ್ಜುನ್ ಸರ್ಜಾಗೆ ನೋಟಿಸ್ ನೀಡಲಾಗಿದೆ. 

ಬೆಂಗಳೂರು :  ಸಿನಿಮಾ ಚಿತ್ರೀಕರಣದ ವೇಳೆ ಹಿರಿಯ ನಟ ಅರ್ಜುನ್‌ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್‌ ದೂರು ನೀಡಿದ್ದ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್ ಠಾಣೆ ಪೊಲೀಸರು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಅರ್ಜುನ್‌ ಸರ್ಜಾಗೆ ನೋಟಿಸ್‌ ನೀಡಿದ್ದಾರೆ.

ಕಬ್ಬನ್‌ಪಾರ್ಕ್ ಠಾಣೆ ಇನ್ಸ್‌ಪೆಕ್ಟರ್‌ ಅಯ್ಯಣ್ಣ ರೆಡ್ಡಿ ಅವರ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಅರ್ಜುನ್‌ ಸರ್ಜಾ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಸೋಮವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಪ್ರಕರಣದ ಸಂಬಂಧ ಈಗಾಗಲೇ ಶ್ರುತಿ ಹರಿಹರನ್‌ ಆಪ್ತ ಸ್ನೇಹಿತೆ ಹಾಗೂ ಆಪ್ತ ಸಹಾಯಕ ಕಿರಣ್‌, ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ, ಸಹ ನಿರ್ದೇಶಕ ಅರುಣ್‌ ವೈದ್ಯನಾಥ್‌ ಹಾಗೂ ವಿಸ್ಮಯ ಚಿತ್ರದ ನಿರ್ಮಾಪಕ ಉಮೇಶ್‌ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. 

ಅಲ್ಲದೆ, ದೂರು ನೀಡಿದ್ದ ಶ್ರುತಿ ಹರಿಹರನ್‌ ಅವರ ಹೇಳಿಕೆಯನ್ನು ಸಹ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಶ್ರುತಿ ಘಟನೆಗೆ ಸಂಬಂಧಿಸಿದ ಕೆಲ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳಿಗೆ ಒದಗಿಸಿದ್ದಾರೆ. ಪ್ರಕರಣದ ಆರೋಪಿ ಅರ್ಜುನ್‌ ಸರ್ಜಾ ಅವರ ಹೇಳಿಕೆ ದಾಖಲಿಸಿಕೊಳ್ಳಲಿದ್ದು, ಸೋಮವಾರ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ
ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!