
ಚಿತ್ರದುರ್ಗ[ಜ.15]: ನಾನು ಮಾರಾಟವಾಗುವವನಲ್ಲ, ನಾನು ಗೂಳಿಹಟ್ಟಿ!
ಹೀಗೆಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್ ಸೋಮವಾರ ರಾತ್ರಿ ಹಾಕಿರುವ ವಾಟ್ಸಪ್ ಸ್ಟೇಟಸ್ ತೀವ್ರ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಗಾಳ ಹಾಕುತ್ತಿದ್ದಾರೆಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು
ಬಿಜೆಪಿ ಶಾಸಕರನ್ನು ದೆಹಲಿಯ ರೆಸಾರ್ಟ್ಗೆ ಕರೆದೊಯ್ದ ಬೆನ್ನಲ್ಲೇ ಗೂಳಿಹಟ್ಟಿಶೇಖರ್ ತಮ್ಮ ಸ್ಟೇಟಸ್ ಅಪ್ಡೇಟ್ ಮಾಡಿರುವುದು ಯಾಕಾಗಿ? ಜೆಡಿಎಸ್ ಅಥವಾ ಕಾಂಗ್ರೆಸ್ನವರು ಅವರನ್ನು ಸಂಪರ್ಕಿಸಿದ್ದರೇ? ಆಮಿಷವೊಡ್ಡಿದ್ದರೇ ಎನ್ನುವ ಪ್ರಶ್ನೆ ಇದೀಗ ಮೂಡಿದೆ. ಆದರೆ, ಗೂಳಿಹಟ್ಟಿಮಾತ್ರ ಯಾರ ಸಂಪರ್ಕಕ್ಕೂ ಸಿಗದೆ ರೆಸಾರ್ಟ್ನಲ್ಲಿ ಕಾಲಕಳೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ