ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಬಿಡಲು ಕರ್ನಾಟಕಕ್ಕೆ ಶಿಫಾರಸು!

Published : Jul 11, 2024, 04:46 PM IST
ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಬಿಡಲು ಕರ್ನಾಟಕಕ್ಕೆ  ಶಿಫಾರಸು!

ಸಾರಾಂಶ

ತಮಿಳುನಾಡಿಗೆ ಕರ್ನಾಟದಿಂದ ನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಬಿಡಲು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.

ನವದೆಹಲಿ (ಜು.11): ತಮಿಳುನಾಡಿಗೆ ಕರ್ನಾಟದಿಂದ ನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಬಿಡಲು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. CWRC (ಕಾವೇರಿ ನೀರು ನಿಯಂತ್ರಣ ಸಮಿತಿ) 99ನೇ ಸಭೆಯಲ್ಲಿ ಶಿಫಾರಸು ಮಾಡಲಾಗಿದ್ದು, ಪ್ರತಿನಿತ್ಯ ಒಂದು ಟಿಎಂಸಿ ನೀರು ತಮಿಳುನಾಡಿಗೆ  ಬಿಡಲು ಹೇಳಿದೆ. CWRC ಶಿಫಾರಸು ಹಿನ್ನೆಲೆ ಜುಲೈ 12 ರಿಂದ ಜುಲೈ 31 ರ ತನಕ ನಿತ್ಯ ಒಂದು ಟಿಎಂಸಿ ನೀರು ಕರ್ನಾಟಕ ಬಿಡಬೇಕಿದೆ.

ಮಂಗಳೂರಿನಲ್ಲಿ ಕಾಣೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಜೊತೆ ಪತ್ತೆ, ಯುವಕನ ಹಿನ್ನೆಲೆ ಕೇಳಿ ಶಾಕ್!

ಕೆಆರ್‌ಎಸ್‌ ಜಲಾಶಯ ಮಟ್ಟ ಇಂದು ಹೀಗಿದೆ.:
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 104.30 ಅಡಿ.
ಗರಿಷ್ಠ ಸಾಂದ್ರತೆ - 49.452 ಟಿಎಂಸಿ
ಇಂದಿನ ಸಾಂದ್ರತೆ - 26.372 ಟಿಎಂಸಿ
ಒಳ ಹರಿವು - 6146 ಕ್ಯೂಸೆಕ್
ಹೊರ ಹರಿವು - 1972 ಕ್ಯೂಸೆಕ್

ಹಣ ಸುಲಿಗೆ ಪ್ರಕರಣ, ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ!

ಕಳೆದ ಮೇ ತಿಂಗಳ ಕೊನೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು  ಮಳೆಗಾಲಕ್ಕೂ ಮುನ್ನವೇ ಕ್ಯಾತೆ ತೆಗೆದಿತ್ತು. ತುರ್ತಾಗಿ ಕಾವೇರಿ ಜಲಾನಯನ ಪ್ರದೇಶದಿಂದ 2.5 ಟಿಎಂಸಿ ನೀರು ಹರಿಸುವಂತೆ ಪಟ್ಟು ಹಿಡಿದಿತ್ತು. ತಮಿಳುನಾಡು ಬೇಡಿಕೆಗೆ ಮಣೆ ಹಾಕಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 2.5 ಟಿಎಂಸಿ ನೀರು ಹರಿಸುವಂತೆ ನಿರ್ದೇಶನ ನೀಡಿತ್ತು. ಅದರಂತೆ ಕರ್ನಾಟಕ ಹರಿಸಿತ್ತು. ಇದು ಕಾವೇರಿ ವಿವಾದಕ್ಕೆ ಕಿಚ್ಚು ಹಚ್ಚಿದಂತಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ