‘ನಿವಾರ್‌’ ಸೈಕ್ಲೋನ್‌: 8 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’

Suvarna News   | Asianet News
Published : Nov 24, 2020, 10:53 AM IST
‘ನಿವಾರ್‌’ ಸೈಕ್ಲೋನ್‌: 8  ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’

ಸಾರಾಂಶ

ಬಂಗಾಳ ಕೊಲ್ಲಿಯಲ್ಲಿ ‘ನಿವಾರ್‌’ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಎಂಟು ಜಿಲ್ಲೆಗಳಿಗೆ ನ.25 ಮತ್ತು ನ.26ರಂದು ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು (ನ. 24): ಬಂಗಾಳ ಕೊಲ್ಲಿಯಲ್ಲಿ ‘ನಿವಾರ್‌’ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಎಂಟು ಜಿಲ್ಲೆಗಳಿಗೆ ನ.25 ಮತ್ತು ನ.26ರಂದು ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಆದರೆ ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ಏಳುವ ‘ಗತಿ ಚಂಡಮಾರುತದಿಂದ ಯಾವುದೇ ತೊಂದರೆ ಇಲ್ಲ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್‌.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

ಕಳೆದ ಮೂರು ದಿನದ ಹಿಂದೆ ಬಂಗಾಳಕೊಲ್ಲಿಯ ನೈಋುತ್ಯ ಭಾಗದಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿ ನ.24ರಂದು ಭಾರಿ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಇದಕ್ಕೆ ‘ನಿವಾರ್‌’ ಚಂಡಮಾರುತ ಎಂದು ಹೆಸರಿಡಲಾಗಿದೆ.

ಈ ನಿವಾರ್‌ ತನ್ನ ಮೂಲ ಸ್ಥಳದಿಂದ ಪೂರ್ವ ದಿಕ್ಕಿನೆಡೆಗೆ ಸಾಗಿ ತಮಿಳುನಾಡು ಪ್ರವೇಶಿಸಲಿದೆ. ಅಲ್ಲಿಂದ ಪುದುಚೇರಿ ಕರಾವಳಿ ಮಾರ್ಗವಾಗಿ ನ. 25ರಂದು ಹಾದು ಹೋಗುತ್ತದೆ. ಈ ಚಂಡಮಾರುತದ ಗಾಳಿ ಹಾದು ಹೋಗುವ ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಭಾರತದ ಮೇಲೆ ಅವಳಿ ಚಂಡಮಾರುತ ದಾಳಿ, 4 ರಾಜ್ಯಗಳಲ್ಲಿ ಮಳೆಯ ಮುನ್ನಚ್ಚರಿಕೆ

ಯೆಲ್ಲೋ ಅಲರ್ಟ್‌ ಎಚ್ಚರಿಕೆ:

ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ರಾಮನಗರ ಸೇರಿ ಎಂಟು ಜಿಲ್ಲೆಗಳಿಗೆ ನ. 25 ಮತ್ತು 26ರಂದು ಭಾರಿ ಮಳೆ ಕಾರಣಕ್ಕೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಈ ಮಳೆ ನಿರೀಕ್ಷಿತ ಪ್ರದೇಶಗಳಲ್ಲಿ ಸುಮಾರು 7-11 ಸೆಂ.ಮೀ.ವರೆಗೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ.

ಉಳಿದಂತೆ ನ.25ರಿಂದ 27ರವರೆಗೆ ಕರಾವಳಿಯ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರಾವಳಿಗೆ ಡಿಕೆಶಿ ಮೆಗಾ ಪ್ಲಾನ್: 300 ಕಿ.ಮೀ ವ್ಯಾಪ್ತಿಯಲ್ಲಿ 'ನ್ಯೂ ಟೂರಿಸಂ ಪಾಲಿಸಿ' ಘೋಷಣೆ!
ಮುಂಡಗೋಡದಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು-ದಲಾಯಿ ಲಾಮಾ ಭೇಟಿ: ವಿಶ್ವಶಾಂತಿಯ ಮಂತ್ರ ಪಠಿಸಿದ ಬೌದ್ಧ ಗುರು!