Cyclone Remal : ರಾಜ್ಯದಲ್ಲಿ ತಗ್ಗಿದ ಮಳೆ - 3 ದಿನ ಕರಾವಳಿಯಲ್ಲಿ ಮಾತ್ರ ಮಳೆ

Published : May 27, 2024, 05:31 AM IST
Cyclone Remal : ರಾಜ್ಯದಲ್ಲಿ ತಗ್ಗಿದ ಮಳೆ - 3 ದಿನ ಕರಾವಳಿಯಲ್ಲಿ ಮಾತ್ರ ಮಳೆ

ಸಾರಾಂಶ

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಕಳೆದ ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿತ್ತು. ಇದೀಗ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ರೆಮಲ್‌’ ಚಂಡಮಾರುತ ಮಳೆಯ ಮಾರುತಗಳನ್ನು ಸೆಳೆಯುತ್ತಿರುವುದರಿಂದ ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ.

ಬೆಂಗಳೂರು  (ಮೇ.27) :  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಕಳೆದ ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿತ್ತು. ಇದೀಗ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ರೆಮಲ್‌’ ಚಂಡಮಾರುತ ಮಳೆಯ ಮಾರುತಗಳನ್ನು ಸೆಳೆಯುತ್ತಿರುವುದರಿಂದ ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಮುಂದಿನ ಮೂರು ದಿನ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಜೂನ್‌ 1ರಿಂದ ಮತ್ತೆ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ಹವಾಮಾನ ಇಲಾಖೆಯ ವರದಿ ಪ್ರಕಾರ, ಕಳೆದ 24 ಗಂಟೆಯಲ್ಲಿ ವಿಜಯಪುರದ ಸಿಂದಗಿ ಹಾಗೂ ಬೆಳಗಾವಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ಬೀದರ್‌ನಲ್ಲಿ ಅತಿ ಹೆಚ್ಚು 40.4 ಡಿಗ್ರಿ ಸೆಲ್ಶಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಟ್ಟಗುಡ್ಡ, ರಸ್ತೆಗಳಲ್ಲಿ ಮಂಜಿನ ಮೆರವಣಿಗೆ: ಮಳೆಗಾಲಕ್ಕೂ ಮುನ್ನವೇ ಮಡಿಕೇರಿ ಕೂಲ್ ಕೂಲ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ