
ಬೆಂಗಳೂರು (ಫೆ.22): ರೋಹಿಣಿ ಸಿಂಧೂರಿ ಅವರ ಹೆಸರೇಳದೇ, ಅವರಿಂದ ಕರ್ನಾಟಕದಲ್ಲಿ ಐಎಎಸ್, ತಮಿಳುನಾಡಿನಲ್ಲಿ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಒಂದು ಐಪಿಎಸ್ ದಂಪತಿ ಜೋಡಿ ವಿಚ್ಛೇದನ ಪಡೆದಿದ್ದಾರೆ. ಈಗ ನಾವು ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರದ ನೋಟಿಸ್ ಹಾಗೂ ವರ್ಗಾವಣೆ ಶಿಕ್ಷೆಗೂ ಬಗ್ಗದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ಪುನಃ ಇಂದು ಬೆಳಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿ ಪೋಸ್ಟ್ ಮಾಡಿದ್ದಾರೆ. ಇಂದೂ ಕೂಡ ಡಿ. ರೂಪಾ ಅವರು ತಮ್ಮ ಫೇಸ್ಬುಕ್ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಅವರ ಹೆಸರು ಹೇಳದೇ ಒಂದು ಪುಟದಷ್ಟು ಆರೋಪಗಳನ್ನು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಮಹಿಳಾ ಅಧಿಕಾರಿಗಳ ಜಗಳ ತಣ್ಣಗಾಯಿತು ಎನ್ನುವಷ್ಟರಲ್ಲಿ ಮತ್ತೆ ಸಿಡಿಯುವಂತೆ ಮಾಡಿದ್ದಾರೆ.
IAS vs IPS Fight:ಡಿಕೆ ರವಿ, ರೋಹಿಣಿ ಸಿಂಧೂರಿ ಪ್ರೇಮ ಸಲ್ಲಾಪ ಸಿಬಿಐ ವರದಿಯಲ್ಲಿದೆ: ಮತ್ತೆ ಕೆದಕಿದ ಡಿ ರೂಪಾ
ನನ್ನ ಕುಟುಂಬ ಉಳಿಸಿಕೊಳ್ಳಲು ಹೋರಾಟ: ಒಬ್ಬ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಮೃತಪಟ್ಟಿದ್ದರು. ಅದೇ ರೀತಿ ತಮಿಳುನಾಡಿನಲ್ಲಿ ಐಪಿಎಸ್ ಅಧಿಕಾರಿ ಸಾವನ್ನದ್ದಾರೆ. ಒಂದು ಐಎಎಸ್ ದಂಪತಿ ವಿಚ್ಚೇದನ ಪಡೆದಿದ್ದಾರೆ. ಆದರೆ, ನಾನು ನನ್ನ ಗಂಡ ಇನ್ನೂ ಒಟ್ಟಿಗೆ ಇದ್ದೇವೆ. ನಾವು ಕುಟುಂಬ ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಮೇಲಿನ ಮಾದರಿಯಲ್ಲಿ ಕುಟುಂಬಕ್ಕೆ ಅಡ್ಡಿಯಾಗುತ್ತಿರುವವರನ್ನ ಪ್ರಶ್ನಿಸಿ. ಇಲ್ಲವಾದರೆ ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಾದ ಮಹಿಳೆ, ನಾನು ಹೋರಾಡುತ್ತೇನೆ ಎಂದು ಡಿ. ರೂಪಾ ಪೋಸ್ಟ್ ಮಾಡಿದ್ದಾರೆ.
ದೇಶದ ಕುಟುಂಬ ಮೌಲ್ಯಗಳನ್ನು ಉಳಿಸಲು ಕೈಜೋಡಿಸಿ: ರಾಜ್ಯದಲ್ಲಿ ನನ್ನಂತೆ ಎಲ್ಲ ಮಹಿಳೆಯರಿಗೂ ಹೋರಾಟದ ಶಕ್ತಿ ಇರುವುದಿಲ್ಲ. ಅಂತ ಮಹಿಳೆಯರಿಗೆ ಧ್ವನಿಯಾಗಿರಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ ಅದನ್ನ ಮುಂದುವರೆಸೋಣ. ಇನ್ನು ಭ್ರಷ್ಟಾಚಾರವನ್ನು ತಡೆಯಲು ಕೂಡ ಎಲ್ಲರೂ ಶ್ರಮಿಸಬೇಕು. ರಾಜ್ಯದಲ್ಲಿ ನಾನು ಯಾರು ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವವರನ್ನ ತಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ.
ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ಟ್ವೀಟ್ ವಾರ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಡಿ. ರೂಪಾ ಅವರು ಹಲವು ಆರೋಪಗಳನ್ನು ಮಾಡಿದ್ದರು. ಆದರೆ, ಇದಕ್ಕೆ ಸರ್ಕಾರಕ್ಕೆ ದೂರು ಸಲ್ಲಿಕೆ ಮೂಲಕ ಉತ್ತರವನ್ನು ನೀಡಿದ್ದ ರೋಹಿಣಿ ಸಿಂಧೂರಿ ಅವರು ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ತಾವು ಸಾಮಾಜಿಕ ಜಾಲತಾಣದಲ್ಲಿ ನಾನು ಆಕ್ಟೀವ್ ಇಲ್ಲ ಎಂದು ಹೇಳಿದ್ದರು. ಹೀಗಾಗಿ, ಡಿ. ರೂಪಾ ಅವರು ಸಾಮಾಜಿಕ ಜಾಲತನಾಣದಲ್ಲಿ ಯಾವುದೇ ಆರೋಪಗಳನ್ನು ಮಾಡಿದ್ದರೂ ಅವುಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಆದರೆ, ಇಂದು ರೋಹಿಣಿ ಸಿಂಧೂರಿ ಅವರ ಅಭಿಮಾನಿಗಳು ಟ್ವಿಟರ್ ಮೂಲಕ ರೂಪಾ ಅವರಿಗೆ ತಿರುಗೇಟು ನೀಡಿದ್ದಾರೆ.
IAS vs IPS Fight: ಖಾಸಗಿ ಫೋಟೋ ಹಂಚಿಕೆ ಬಗ್ಗೆ ಪ್ರತಿಕ್ರಿಯೆ: ರೂಪಾಗೆ ಮಾನಸಿಕ ಸ್ಥಿಮಿತವಿಲ್ಲ ಎಂದ ರೋಹಿಣಿ ಸಿಂಧೂರಿ
ಡಿ ರೂಪಗೆ ಟ್ವಿಟರ್ ಮೂಲಕ ಟಾಂಗ್: ಐಪಿಎಸ್ ಅಧಿಕಾರಿ ಡಿ.ರೂಪ ತಮ್ಮ ಅಧಿಕೃತ ಕರ್ತವ್ಯ ಮೀರಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ರೋಹಿಣಿ ಸಿಂಧೂರಿ ವಿರುದ್ದ ವಿವಾದಗಳನ್ನ ಸೃಷ್ಟಿಸುತ್ತಿದ್ದಾರೆ. ಈ ಮೂಲಕ ಅವರು ಮೇಲಿಂದ ಮೇಲೆ ಆರೋಪ ಮಾಡುತ್ತಿರುವದರಿಂದ ಸಾರ್ವಜನಿಕವಾಗಿ ನಕಾರಾತ್ಮಕವಾಗಿ ಬಿಂಬಿಸಲು ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ರೋಹಿಣಿ ಸಿಂಧೂರಿ ಫ್ಯಾನ್ ಪೇಜ್ ನಿಂದ ಟ್ವೀಟ್ ಮಾಡಲಾಗಿದೆ.
ಸರಣಿ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಅಭಿಮಾನಿಗಳು: ಚಾಮರಾಜನಗರ ಘಟನೆಯಲ್ಲಿ ಆಕೆ (ರೋಹಿಣಿ ಸಿಂಧೂರಿ) ಆರೋಪಿ ಎಂದು ಹೇಳುವ ಮೊದಲು ದಯವಿಟ್ಟು ವರದಿಯನ್ನು ಓದಿ.
ಆರೋಪಗಳನ್ನು ಮಾಡುವ ಮೂಲಕ ಸೂಪರ್ ಕಾಪ್ ಆಗಲು ಸಾಧ್ಯವಿಲ್ಲ:
ಹೀಗೆ ಸರಣಿ ಟ್ವೀಟ್ಗಳನ್ನು ಮಾಡುವ ಮೂಲಕ ರೋಹಿಣಿ ಸಿಂಧೂರಿ ಅವರ ಅಭಿಮಾನಿಗಳು ಡಿ. ರೂಪಾ ಅವರಿಗೆ ಟಾಂಗ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ