ಮೈಸೂರಲ್ಲಿ ದಕ್ಷಿಣ ಅಯೋಧ್ಯಾ ಮಂದಿರಕ್ಕೆ ವಿರೋಧ, ಕೇಸರಿಕರಣ ಸಲ್ಲ: ದಲಿತ ಸಂಘಟನೆ

Kannadaprabha News   | Kannada Prabha
Published : May 24, 2025, 07:19 AM IST
Dalit Sangharsh Samiti

ಸಾರಾಂಶ

ಬಾಲರಾಮ ಶಿಲೋದ್ಭವ ಕ್ಷೇತ್ರ ಚಾರಿಟಬಲ್ ಟ್ರಸ್ಟ್ ಶುಕ್ರವಾರ ಮೈಸೂರು ತಾಲೂಕು ಹಾರೋಹಳ್ಳಿ ಬಳಿಯ ಗುಜ್ಜೇಗೌಡನಪುರದಲ್ಲಿ ಆಯೋಜಿಸಿದ್ದ ಬಾಲರಾಮನ ಮೂರ್ತಿ ಕೆತ್ತನೆ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಮೈಸೂರು (ಮೇ.24): ಬಾಲರಾಮ ಶಿಲೋದ್ಭವ ಕ್ಷೇತ್ರ ಚಾರಿಟಬಲ್ ಟ್ರಸ್ಟ್ ಶುಕ್ರವಾರ ಮೈಸೂರು ತಾಲೂಕು ಹಾರೋಹಳ್ಳಿ ಬಳಿಯ ಗುಜ್ಜೇಗೌಡನಪುರದಲ್ಲಿ ಆಯೋಜಿಸಿದ್ದ ಬಾಲರಾಮನ ಮೂರ್ತಿ ಕೆತ್ತನೆ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಅಯೋಧ್ಯಾ ರಾಮಮಂದಿರಲ್ಲಿರುವ ಬಾಲರಾಮನ ವಿಗ್ರಹಕ್ಕೆ ಮೂಲ ಶಿಲೆ ಸಿಕ್ಕ ಜಾಗದಲ್ಲಿ ದಕ್ಷಿಣ ಅಯೋಧ್ಯಾ ಮಂದಿರ ನಿರ್ಮಿಸಲು ಉದ್ದೇಶಿಸಲಾಗಿದೆ. ಆದರೆ, ಮಂದಿರ ನಿರ್ಮಾಣಕ್ಕೆ ದಲಿತ ಸಂಘಟನೆಯ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಶುಕ್ರವಾರ ಪ್ರತಿಭಟಿಸಿದರು.

ಅಲ್ಲದೆ, ಕಾರ್ಯಕ್ರಮ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದರು. ಹೀಗಾಗಿ, ಆಯೋಜಕರು ಕಾರ್ಯಕ್ರಮ ರದ್ದುಗೊಳಿಸಿದ್ದಾರೆ. ಹಾರೋಹಳ್ಳಿ ಗ್ರಾಮದ ಡಾ। ಬಿ.ಆರ್. ಅಂಬೇಡ್ಕರ್ ಯುವಕರ ಸಂಘಟನೆಗಳ ನೇತೃತ್ವದಲ್ಲಿ ಹಾರೋಹಳ್ಳಿ ರಸ್ತೆ ಮಾರ್ಗವಾಗಿ ಬುದ್ದ ಮತ್ತು ಡಾ। ಬಿ.ಆರ್.ಅಂಬೇಡ್ಕರ್ ಮೂರ್ತಿಯೊಂದಿಗೆ ಮೆರವಣಿಗೆ ನಡೆಸಿ, ರಾಮನ ವಿಗ್ರಹ ಸ್ಥಾಪಿಸಿದ ಪಕ್ಕದ ಜಾಗದಲ್ಲಿಯೇ ಬುದ್ಧ ಮತ್ತು ಅಂಬೇಡ್ಕರ್ ಮೂರ್ತಿ ನಿಲ್ಲಿಸಿ ವಿರೋಧ ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಹಾರೋಹಳ್ಳಿ ಗ್ರಾಮದ ಇತಿಹಾಸವನ್ನು ಬದಲು ಮಾಡಬೇಕೆಂದು ಮನುವಾದಿಗಳು ಮುಂದಾಗಿದ್ದು, ಅಂಬೇಡ್ಕರ್ ಅನುಯಾಯಿಗಳು ಅದನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾರೋಹಳ್ಳಿ ಗ್ರಾಮದಲ್ಲಿ ಬ್ರಾಹ್ಮಣಶಾಹಿಗಳು ಕೇಸರಿಕರಣ ಮಾಡಲು, ದಕ್ಷಿಣ ಮಂದಿರ ಕಟ್ಟಿ ಸೌಹಾರ್ದತೆಯ ಜೀವನವನ್ನು ಹಾಳು ಮಾಡುವ ಹುನ್ನಾರ ತಡೆದಿದ್ದೇವೆ ಎಂದರು.

ಹಾರೋಹಳ್ಳಿ ಸುರೇಶ್ ಮಾತನಾಡಿ, ಹಾರೋಹಳ್ಳಿ ಗ್ರಾಮದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ರಾಜಕೀಯ ಕುತಂತ್ರಕ್ಕೆ ನಮ್ಮ ಸಮುದಾಯವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ನಾವು ನಮ್ಮ ಗ್ರಾಮವನ್ನು ಯಾವುದೇ ಕಾರಣಕ್ಕೂ ಕೇಸರಿಕರಣ ಮಾಡುವುದಕ್ಕೂ ಬಿಡುವುದಿಲ್ಲ. ಈಗಾಗಲೇ ಕಲ್ಲು ಸಿಕ್ಕಿದ್ದ ಪಕ್ಕದ ಸ್ಥಳದಲ್ಲಿಯೇ ಬುದ್ಧ ಮಂದಿರ ನಿರ್ಮಾಣ ಮಾಡುವ ಕುರಿತು ಚರ್ಚಿಸಿದ್ದು, ಸ್ವಂತ ಜಮೀನನ್ನೇ ನೀಡುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!