ದತ್ತಪೀಠ ಸಂಪೂರ್ಣ ಹಿಂದೂಗಳಿಗೆ ಸೇರಿದ್ದು; ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸಿ.ಟಿ.ರವಿ ಆಗ್ರಹ

Published : Dec 03, 2025, 10:17 AM IST
Dattapita: CT Ravi Demands Judge-Led Inquiry

ಸಾರಾಂಶ

ದತ್ತಪೀಠವು ಸಂಪೂರ್ಣವಾಗಿ ಹಿಂದೂಗಳಿಗೆ ಸೇರಿದ್ದು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಪಾದಿಸಿದ್ದಾರೆ. ಈ ವಿವಾದದ ಕುರಿತು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ, ಸರ್ಕಾರಿ ದಾಖಲೆಗಳ ಆಧಾರದ ಮೇಲೆ ನಿರ್ಣಯ ಕೈಗೊಳ್ಳುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು (ಡಿ.3): ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿಟಿ ರವಿ ಅವರು ಮಹತ್ವದ ಹೇಳಿಕೆ ನೀಡಿದ್ದು, ದತ್ತಪೀಠವು ಸಂಪೂರ್ಣವಾಗಿ ಹಿಂದೂಗಳಿಗೆ ಸೇರಿದ್ದು ಎಂದು ಪ್ರತಿಪಾದಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಕುರಿತು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಸರ್ಕಾರಿ ದಾಖಲೆಗಳಿವೆ ತನಿಖೆ ನಡೆಸಲಿ:

ಸರ್ಕಾರಿ ದಾಖಲೆಗಳು ಹಾಗೂ ಮೈಸೂರು ಪತ್ರಾಗಾರದಲ್ಲಿರುವ ದಾಖಲೆಗಳನ್ನು ಸಮಿತಿಯು ಸಂಪೂರ್ಣವಾಗಿ ಪರಿಶೀಲಿಸಬೇಕು. ದತ್ತಪೀಠ ಬೇರೆ, ಬಾಬಾಬುಡನ್ ದರ್ಗಾ ಬೇರೆ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಅಂದು ಸ್ವಾರ್ಥಕ್ಕಾಗಿ ಹರಕೆ-ಕಾಣಿಕೆ, ಭೂಮಿಯನ್ನು ಅತಿಕ್ರಮಿಸಲು ಸಂಚು ಮಾಡಲಾಯಿತು. ಆ ಸಂಚಿಗೆ ಸರ್ಕಾರ ಒತ್ತಾಸೆಯಾಗಿ ನಿಲ್ಲಬಾರದು ಎಂದರು.

ಸರ್ಕಾರಕ್ಕೆ ನ್ಯಾಯ ಕೊಡಿಸಲು ಈಗಲೂ ಅವಕಾಶವಿದೆ:

ನಾವು ಐದು ದಶಕಗಳಿಂದ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇವೆ. ಈಗಲೂ ಸರ್ಕಾರದಿಂದ ನ್ಯಾಯ ಕೊಡಲು ಅವಕಾಶವಿದೆ. ಕೂಡಲೇ ಒಂದು ಸಮಿತಿ ರಚಿಸಿ ದಾಖಲೆಗಳನ್ನು ಪರಿಶೀಲಿಸಿ, ಆಧಾರಗಳ ಮೇಲೆಯೇ ನಿರ್ಣಯ ತೆಗೆದುಕೊಳ್ಳಲಿ ಎಂದು ಸಿ.ಟಿ.ರವಿ ಸರ್ಕಾರವನ್ನು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ