
ಬೆಂಗಳೂರು (ಮೇ.27): ರಾಜ್ಯದ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.
ಕೋವಿಡ್ ಕಾರ್ಯಪಡೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ಇನ್ನೋರ್ವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೊಂದಿಗೆ 1.30ಕ್ಕೆ ರಾಜಭವನಕ್ಕೆ ತೆರಳಿದ ಡಾ.ಅಶ್ವತ್ಥ ನಾರಾಯಣ, ಈವರೆಗೂ ಸೋಂಕು ತಡೆಗಟ್ಟಲು ಲಾಕ್ಡೌನ್, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಮಗ್ರ ಮಾಹಿತಿ ನೀಡಿದರು.
2ನೇ ಅಲೆಯಲ್ಲಿಯೇ ಮಕ್ಕಳು, ಯುವಕರಿಗೆ ಹೆಚ್ಚು ಸೋಂಕು..! ...
ಲಾಕ್ಡೌನ್ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇದರ ಜತೆಯಲ್ಲೇ 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡವ ಕೆಲಸ ನಡೆಯುತ್ತಿದೆ. ಇಡೀ ರಾಜ್ಯಾದ್ಯಂತ ಆಮ್ಲಜನಕ, ಔಷಧಿ, ರೆಮಿಡಿಸಿವಿರ್ ಕೊರತೆಯನ್ನು ನೀಗಿಸಲಾಗಿದೆ ಎಂದು ಡಿಸಿಎಂ ಅವರು ಅಂಕಿ- ಅಂಶಗಳ ಸಮೇತ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಿದರು.
ಬ್ಲ್ಯಾಕ್ ಫಂಗಸ್ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಈ ಕಾಯಿಲೆಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ನಿರಂತರವಾಗಿ ಕೇಂದ್ರ ಸರಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರಕಾರ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ