ಬೆಂಗ್ಳೂರಿನಲ್ಲಿ ಕೋವಿಡ್‌ ಪರಿಸ್ಥಿತಿ ನಿರ್ವಹಿಸಲು ದಕ್ಷಿಣ ಕೊರಿಯಾ ನೆರವು

Published : May 21, 2021, 04:14 PM ISTUpdated : May 21, 2021, 04:30 PM IST
ಬೆಂಗ್ಳೂರಿನಲ್ಲಿ ಕೋವಿಡ್‌ ಪರಿಸ್ಥಿತಿ ನಿರ್ವಹಿಸಲು ದಕ್ಷಿಣ ಕೊರಿಯಾ ನೆರವು

ಸಾರಾಂಶ

* ಬೆಂಗ್ಳೂರಿನಲ್ಲಿ ಕೋವಿಡ್‌ ಪರಿಸ್ಥಿತಿ ನಿರ್ವಹಿಸಲು ದಕ್ಷಿಣ ಕೊರಿಯಾ ನೆರವು * ದಕ್ಷಿಣ ಕೊರಿಯಾದ ಸಿಯೋಲ್‌ ಸೆಮಿಕಂಡಕ್ಟರ್‌ನಿಂದ ಕೋವಿಡ್‌ ಸರಂಜಾಮು  * ಕಂಪನಿಯ ನೆರವು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಡಿಸಿಎಂ  

ಬೆಂಗಳೂರು, (ಮೇ.21): ದಕ್ಷಿಣ ಕೊರಿಯಾ ಮೂಲದ ಸಿಯೋಲ್‌ ಸೆಮಿಕಂಡಕ್ಟರ್‌ ಕಂಪನಿ ಬೆಂಗಳೂರಿನಲ್ಲಿ ಕೋವಿಡ್‌ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಾದ ವೈದ್ಯಕೀಯ ಸರಂಜಾಮುಗಳನ್ನು ಉಚಿತವಾಗಿ ನೀಡಿದೆ. 

ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾದ ಕಂಪನಿಯ ಅಧಿಕಾರಿಗಳು ಸಾಂಕೇತಿಕವಾಗಿ ಕೆಲ ಸರಂಜಾಮುಗಳನ್ನು ಹಸ್ತಾಂತರಿಸಿದರು. 

ದುಬೈಯಿಂದ ಮಂಗಳೂರಿಗೆ 31 ಡ್ಯೂರೂ ಆಕ್ಸಿಜನ್‌ ಸಿಲಿಂಡರ್‌

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, "ಕೋವಿಡ್‌ ಸೋಂಕು ನಿವಾರಣೆಗೆ ನಡೆಯತ್ತಿರುವ ಈ ಹೋರಾಟದಲ್ಲಿ ಖಾಸಗಿ ಕಂಪನಿಗಳು ಕೈಜೋಡಿಸುತ್ತಿರುವುದು ಸಂತಸದ ಸಂಗತಿ. ಈ ನಿಟ್ಟಿನಲ್ಲಿ ಸಿಯೋಲ್‌ ಸೆಮಿಕಂಡಕ್ಟರ್‌ ಕಂಪನಿ 30,000 ಕೆ-94 ಮಾಸ್ಕ್‌, 20,000 ಮೆಡಿಕಲ್‌ ಗ್ಲೌಸ್‌, 2,500 ವಾಯು ಸಂಸ್ಕರಣಾ ಸಲಕರಣೆ, 100 ಪಿಪಿಇ ಕಿಟ್‌ಗಳನ್ನು ಬೆಂಗಳೂರಿನ ಪಶ್ಚಿಮ ವಿಭಾಗದಲ್ಲಿ ಬಳಸುವಂತೆ ನೀಡಿದೆ" ಎಂದರು. 

ಈ ಸಂದರ್ಭದಲ್ಲಿ ನಡೆದ ವರ್ಚುಯಲ್‌ ಸಭೆಯಲ್ಲಿ ಕಂಪನಿಯ ಸಿಇಒ ಚುಂಗ್‌ ಹೂನ್ ಲೀ ಮುಂತಾದವರು ಭಾಗಿಯಾಗಿದ್ದರು. ಕಂಪನಿಯ ಭಾರತೀಯ ಉಪಾಧ್ಯಕ್ಷ ಅರ್ಷಿ ಕೃಷ್ಣಾಚಾರ್‌  ಇದ್ದರು. ಬೆಂಗಳೂರಿನ ಹೊಂಗಿರಣ ಟ್ರಸ್ಟ್‌ ಮೂಲಕ ಈ ಕಂಪನಿಯ ನೆರವು ಸಿಕ್ಕಿದೆ. ಈ ಕಾರಣಕ್ಕಾಗಿ ಡಿಸಿಎಂ ಅವರು ಈ ವೇಳೆ ಹಾಜರಿದ್ದ ಟ್ರಸ್ಟ್‌ನ ಅಧ್ಯಕ್ಷ ಡಾ.ರವಿಶಂಕರ್‌, ಡಾ.ಪಿ.ಎನ್.‌  ಗೋವಿಂದ ರಾಜುಲು ಅವರಿಗೆ ಕೃತಜ್ಞತೆ ಸಲ್ಲಿಸಿದರು. 

ಕಂಪನಿಯವರೇ ಹೇಳುವ ಹಾಗೆ ಈ ಉತ್ಪನ್ನಗಳ ವೆಚ್ಚ ಸುಮಾರು ಏಳು ಕೋಟಿ ಆಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!