ಬೆಂಗಳೂರಲ್ಲಿ ಮಳೆಗಾಲದ ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರ ಅಗತ್ಯ, ಅಶ್ವತ್ಥ ನಾರಾಯಣ

Kannadaprabha News   | Asianet News
Published : Sep 11, 2020, 07:40 AM IST
ಬೆಂಗಳೂರಲ್ಲಿ ಮಳೆಗಾಲದ ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರ ಅಗತ್ಯ, ಅಶ್ವತ್ಥ ನಾರಾಯಣ

ಸಾರಾಂಶ

ಬೆಂಗಳೂರು ಕಾಂಕ್ರಿಟ್‌ ಕಾಡಾಗಿದ್ದು ಸ್ವಲ್ಪ ಮಳೆ ಬಂದರೂ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ| ಅಲ್ಲಲ್ಲಿ ಮಳೆ ನೀರು ಇಂಗು ಗುಂಡಿಗಳ ರಚನೆಗೆ ಒತ್ತು ನೀಡಬೇಕು| ರಾಜಕಾಲುವೆಯಲ್ಲಿ ನೀರು ಹರಿಯುವ ಸಾಮರ್ಥ್ಯ ಹೆಚ್ಚಿಸಬೇಕಾಗಿದೆ| ಎಷ್ಟೇ ಮಳೆ ಬಂದರೂ ಪ್ರವಾಹ ಉಂಟಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದ ಅಶ್ವತ್ಥ ನಾರಾಯಣ| 

ಬೆಂಗಳೂರು(ಸೆ.11): ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸುಧಾರಣಾ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದ್ದಾರೆ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕಾಂಕ್ರಿಟ್‌ ಕಾಡಾಗಿದ್ದು ಸ್ವಲ್ಪ ಮಳೆ ಬಂದರೂ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಹಾಗಾಗಿ, ಅಲ್ಲಲ್ಲಿ ಮಳೆ ನೀರು ಇಂಗು ಗುಂಡಿಗಳ ರಚನೆಗೆ ಒತ್ತು ನೀಡಬೇಕು. ರಾಜಕಾಲುವೆಯಲ್ಲಿ ನೀರು ಹರಿಯುವ ಸಾಮರ್ಥ್ಯ ಹೆಚ್ಚಿಸಬೇಕಾಗಿದೆ. ಎಷ್ಟೇ ಮಳೆ ಬಂದರೂ ಪ್ರವಾಹ ಉಂಟಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!

ಈಗಾಗಲೇ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ ಉಳಿದಿರುವ ಕಡೆಗಳಲ್ಲಿ ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ