
ನವಲಗುಂದ (ಡಿ.8): ಶಾಸಕ ಕೋನರೆಡ್ಡಿಯವರು ಸರ್ವಧರ್ಮದ ಮದುವೆಯ ಕಾರ್ಯಕ್ರಮ ಮಾಡಿದ್ದಾರೆ. ತಮ್ಮ ಮಗನ ಮದುವೆಯ ಸಂದರ್ಭದಲ್ಲಿ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಿದ್ದಾರೆ. ಇದೊಂದು ಆದರ್ಶನೀಯ ಕಾರ್ಯಕ್ರಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಶ್ಲಾಘಿಸಿದರು.
ನವಲಗುಂದದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ವಧು-ವರರಿಗೆ ಅಕ್ಷತೆ ಹಾಕಿ ಅವರು ಮಾತನಾಡಿದರು. ಉಳಿ ಪೆಟ್ಟು ಬಿದ್ದಾಗಲೇ ಕಲ್ಲು ಶಿಲೆಯಾಗಲು ಸಾಧ್ಯ. ಇಲ್ಲಿ ನಿಮ್ಮೆಲ್ಲರ ಆಶೀರ್ವಾದ ಇಲ್ಲದೆ ಈ ಕಾರ್ಯಕ್ರಮ ಸಾಧ್ಯವಾಗುತ್ತಿರಲಿಲ್ಲ. ಹೆಣ್ಣು ಒಂದು ಕಡೆ, ಗಂಡು ಒಂದು ಕಡೆ ಇತ್ತು. ಅವರಿಬ್ಬರೂ ಸೇರಿ ವಧು-ವರರಾದರೆ, ಅಕ್ಕಿ ಒಂದು ಕಡೆ, ಅರಿಶಿನ ಸೇರಿ ಮಂತ್ರಾಕ್ಷತೆಯಾಯಿತು. ಮದುವೆಯ ಖರ್ಚಿನ ಹಣದಿಂದ ಸ್ವಂತ ಉದ್ಯೋಗವನ್ನು ಮಾಡುವ ಮೂಲಕ ಹೊಸ ಜಗತ್ತಿನಲ್ಲಿ ಮತ್ತೊಬ್ಬರಿಗೆ ಉದ್ಯೋಗ ಕೊಡುವ ರೀತಿಯಲ್ಲಿ ಬೆಳೆಯಿರಿ ಎಂದು ಸಲಹೆ ನೀಡಿದರು.
ಇದು ಐತಿಹಾಸಿಕ ಕಾರ್ಯಕ್ರಮ. ಇದು ಸರ್ವಧರ್ಮ ಕಾರ್ಯಕ್ರಮ. ಶಾಂತಿಯ ತೋಟ, ಇದೇ ನಮ್ಮ ತತ್ವ. ಕೋನರೆಡ್ಡಿಯವರು ಅವರ ಮಗನ ಮದುವೆಯ ಸಂದರ್ಭದಲ್ಲಿ 75 ಜೋಡಿಗಳ ಸಾಮೂಹಿಕ ವಿವಾಹ ಏರ್ಪಡಿಸಿದ್ದಾರೆ. ನಿಮ್ಮ ಕುಟುಂಬಗಳಿಗೆ ಒಳ್ಳೆಯದಾಗಲಿ. ನೀವೆಲ್ಲರೂ ಆದರ್ಶ ದಂಪತಿಯಾಗಿ ಸುಖದಿಂದ ಬಾಳಿ. ಇಡೀ ಸರಕಾರವೇ ನಿಮ್ಮೆಲ್ಲರಿಗೆ ಆಶೀರ್ವಾದ ಮಾಡಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ