
ಕಲಬುರಗಿ(ಜು.06): ನಗರದ ರಾಘವೇಂದ್ರ ಕಾಲೋನಿಯ ರುದ್ರಭೂಮಿಯಲ್ಲಿರುವ ವಿದ್ಯುತ್ ಚಿತಾಗಾರಕ್ಕೆ ಮಹಾರಾಷ್ಟ್ರ ಗಡಿಯಿಂದ ಕೋವಿಡ್ ಸೋಂಕಿತ ಮೃತ ದೇಹಗಳು ಆಗಮಿಸುತ್ತಿದ್ದು ಅವುಗಳನ್ನು ಇಲ್ಲಿಯೇ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ್ ಆರೋಪಿಸಿದ್ದಾರೆ.
ಲಾಕ್ಡೌನ್ ಜಾರಿ ಇಲ್ಲ, ಬೆಂಗಳೂರು ಬಿಟ್ಟು ಹೋಗ್ಬೇಡಿ: ಸಚಿವರ ಮನವಿ!
ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನೆರೆ ರಾಜ್ಯಗಳ ಮೃತ ದೇಹಗಳನ್ನು ಕಲಬುರಗಿ ಚಿತಾಗಾರದಲ್ಲೇಕೆ ಸಂಸ್ಕಾರ ಮಾಡಬೇಕು. ಆಯಾ ಊರಲ್ಲೇ ಸಂಸ್ಕಾರ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಕಳೆದೊಂದು ವಾರದಿಂದ ಆ್ಯಂಬುಲೆನ್ಸ್ನಲ್ಲಿ ಕಲಬುರಗಿ ವಿದ್ಯುತ್ ಚಿತಾಗಾರಕ್ಕೆ ಹಲವು ಮೃತ ದೇಹಗಳು ಮಹಾ ಗಡಿಗೆ ಅಂಟಿಕೊಂಡಿರುವ ಊರುಗಳಿಂದ ಆಗಮಿಸುತ್ತಿದ್ದು, ಇದರಿಂದ ರುದ್ರಭೂಮಿ ಇರುವ ಪ್ರದೇಶದಲ್ಲಿ ಆತಂಕ ಮೂಡಿದೆ.
ಈ ಸಂಬಂಧ ತಕ್ಷಣ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಭೇಟಿ ನೀಡಿ ಚಿತಾಗಾರದಲ್ಲಿನ ಬೆಳವಣಿಗೆ ಗಮನಿಸಿ ಸದರಿ ಸಮಸ್ಯೆ ಬೆಳೆಯದಂತೆ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ