ಶೋಧ ಕಾರ್ಯ ವೇಳೆ ಸಿಕ್ಕ ಕಾರ್ಡ್‌ಗಳ ರಹಸ್ಯ ಬಯಲು, ಡೆಬಿಟ್ ಕಾರ್ಡ್ ಯಾರದ್ದೆಂದು ಪತ್ತೆ ಹಚ್ಚಿದ ಎಸ್‌ಐಟಿ

Published : Jul 31, 2025, 07:51 PM ISTUpdated : Jul 31, 2025, 07:52 PM IST
DHARMASTALA SIT INVSTIGATION 07

ಸಾರಾಂಶ

ಧರ್ಮಸ್ಥಳದ ನೇತ್ರಾವದಿ ನದಿ ತೀರದಲ್ಲಿ ಪತ್ತೆಯಾದ ಡೆಬಿಟ್ ಮತ್ತು ಪಾನ್ ಕಾರ್ಡ್‌ಗಳು ಮೃತ ವ್ಯಕ್ತಿಯ ತಾಯಿಗೆ ಸೇರಿದ್ದೆಂದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. ಕಾರ್ಡ್‌ಗಳ ಮಾಲೀಕರು ಜೀವಂತವಾಗಿದ್ದು, ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ.

ಬೆಳ್ತಂಗಡಿ: ಧರ್ಮಸ್ಥಳ ಸಮಾಧಿ ಪ್ರಕರಣ   ಸಂಬಂಧ ನೇತ್ರಾವದಿ ನದಿ ದಂಡೆಯ ಸಮೀಪದ ಪಾಯಿಂಟ್ ನಂ. 1ರಲ್ಲಿ ಪತ್ತೆಯಾದ ಡೆಬಿಟ್ ಕಾರ್ಡ್ ಮತ್ತು ಪಾನ್ ಕಾರ್ಡ್ ಇತ್ತೀಚೆಗೆ ಹಲವು ಊಹಾಪೋಹಗಳಿಗೆ ಕಾರಣವಾಗಿದ್ದವು. ಈ ಪತ್ತೆಯಾದ ಕಾರ್ಡ್‌ಗಳು ಸಾವಿಗೀಡಾದ ವ್ಯಕ್ತಿಗೆ ಸೇರಿದ್ದಾಗಿರಬಹುದೆಂಬ ಅನುಮಾನಗಳು ವ್ಯಾಪಕವಾಗಿದ್ದವು. ಆದರೆ ಇದೀಗ ತನಿಖೆಯಲ್ಲಿ ಮಹತ್ವದ ಮಾಹಿತಿ ಹೊರಬಿದ್ದಿದೆ. ಪತ್ತೆಯಾದ ಡೆಬಿಟ್ ಕಾರ್ಡ್, ಮೃತ ವ್ಯಕ್ತಿಯ ತಾಯಿಗೆ ಸೇರಿದ್ದಾಗಿದ್ದು, ಅವರು ಇನ್ನೂ ಜೀವಂತವಾಗಿದ್ದಾರೆ ಎಂಬುದು ದೃಢಪಟ್ಟಿದೆ. ಈ ವಿಚಾರವನ್ನು ಎಸ್‌ಐಟಿ (ವಿಶೇಷ ತನಿಖಾ ತಂಡ) ಸ್ವತಃ ಮಹಿಳೆಯನ್ನು ಸಂಪರ್ಕಿಸುವ ಮೂಲಕ ಖಚಿತಪಡಿಸಿಕೊಳ್ಳಲಾಗಿದೆ.

ಇದೇ ವೇಳೆ ಪತ್ತೆಯಾದ ಪಾನ್ ಕಾರ್ಡ್ ವಿಷಯದಲ್ಲೂ ಹಿಂದಿನ ವರದಿಗಳಲ್ಲಿ ಈ ಕಾರ್ಡ್ ಅನಾರೋಗ್ಯದಿಂದ ಮೃತಪಟ್ಟ ವ್ಯಕ್ತಿಗೆ ಸೇರಿದದ್ದೆಂದು ತಿಳಿದು ಬಂದಿದೆ. ಡೆಬಿಟ್ ಕಾರ್ಡ್ ಕೂಡ ಪಾನ್ ಕಾರ್ಡ್ ಪತ್ತೆಯಾದ ಅವರ ತಾಯಿಗೆ ಸೇರಿರುವುದು ದೃಢವಾಗಿದೆ.

ಪಾಯಿಂಟ್ ನಂಬರ್ 1ರಲ್ಲಿ ಬಟ್ಟೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿತ್ತು. ಈ ಬಗ್ಗೆ ಕೊಲೆಯಾದ ಅನನ್ಯಾ ಭಟ್ ಪರ ವಕೀಲ ಮಂಜುನಾಥ್ ಮಾಹಿತಿ ನೀಡಿದ್ದರು. ಒಂದರಲ್ಲಿ ಪುರುಷರ ಹೆಸರು, ಮತ್ತೊಂದರಲ್ಲಿ ಮಹಿಳೆಯ ಹೆಸರು ‘ಲಕ್ಷ್ಮಿ’ ಎಂದಿತ್ತು. ಇದೀಗ ಪ್ರಾಥಮಿಕ ಪರಿಶೀಲನೆಯ ನಂತರ, ಪಾನ್ ಕಾರ್ಡ್‌ ಹೊಂದಿರುವ ವ್ಯಕ್ತಿ 2025ರ ಮಾರ್ಚ್ ತಿಂಗಳಲ್ಲಿ ಜಾಂಡೀಸ್‌ ಕಾಯಿಲೆಯಿಂದ ಮೃತಪಟ್ಟಿರುವುದು ಬಹಿರಂಗವಾಗಿದೆ. ಮೃತಪಟ್ಟ ವ್ಯಕ್ತಿಯ ತಾಯಿಗೆ ಸೇರಿದ ಕಾರ್ಡ್ ಇದಾಗಿದೆ.

ಎಸ್‌ಐಟಿ ತಂಡವು ಕಾರ್ಡ್‌ಗಳ ಬಳಕೆದಾರರ ವಿವರಗಳನ್ನು ಪರಿಶೀಲಿಸಿ, ಎಲ್ಲ ರೀತಿಯ ಅನಧಿಕೃತ ಊಹಾಪೋಹಗಳಿಗೆ ತೆರೆ ಎಳೆದಿದೆ. ಈ ಮೂಲಕ, ಡೆಬಿಟ್ ಕಾರ್ಡ್‌ ಹಾಗೂ ಪಾನ್ ಕಾರ್ಡ್‌ಗಳ ಸುತ್ತಲಿನ ಗೊಂದಲವನ್ನು ನಿವಾರಿಸಿದ್ದು, ಪ್ರಕರಣದ ಇತರ ಅಂಶಗಳತ್ತ ತನಿಖೆಯನ್ನು ಮುಂದುವರೆಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌