ಕರ್ನಾಟಕದ ಜನತೆಗೆ ಮತ್ತೊಂದು ಶಾಕ್‌: ಮತ್ತೆ ಹಾಲಿನ ದರ ಹೆಚ್ಚಳ?

Published : Sep 14, 2024, 04:42 AM IST
ಕರ್ನಾಟಕದ ಜನತೆಗೆ ಮತ್ತೊಂದು ಶಾಕ್‌: ಮತ್ತೆ ಹಾಲಿನ ದರ ಹೆಚ್ಚಳ?

ಸಾರಾಂಶ

ಹಾಲಿನ ದರ ಹೆಚ್ಚಳ ಮಾಡುವ ಜೊತೆಗೆ ಡೇರಿಗಳಿಗೆ ಪ್ರತಿ ಲೀಟರ್ ಹಾಲಿಗೆ 20 ಪೈಸೆ ಕೊಡಬೇಕೆಂದು ಹಾಲು ಒಕ್ಕೂಟದವರು ಕೇಳುತ್ತಿದ್ದಾರೆ. ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಮಾಗಡಿ(ಸೆ.14): ಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಹೆಚ್ಚಳ ಮಾಡಿದ ದರವನ್ನೆಲ್ಲ ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ನೀವು (ರೈತರು) ನಮ್ಮ ಪರ ಮಾತನಾಡುತ್ತೀರಾ ಅನ್ನುವುದಾದರೆ ಹಾಲಿನ ದರ ಹೆಚ್ಚಳ ಮಾಡುತ್ತೇನೆಂದು ಹೇಳಿದರು. ಇದಕ್ಕೆ ಸಭಿಕರ ಸಾಲಿನಲ್ಲಿದ್ದ ರೈತರು ಚಪ್ಪಾಳೆ ತಟ್ಟಿದಾಗ ಹಾಲಿನ ದರ ಹೆಚ್ಚಳ ಮಾಡುತ್ತೇನೆ. ಹೆಚ್ಚಳ ಮಾಡಿದ ಹಣವನ್ನೆಲ್ಲ ಹೈನುಗಾರರಿಗೆ ಕೊಡುತ್ತೇವೆ ಎಂದರು.

ಹಾಲಿನ ದರ ಹೆಚ್ಚಳ ಮಾಡುವ ಜೊತೆಗೆ ಡೇರಿಗಳಿಗೆ ಪ್ರತಿ ಲೀಟರ್ ಹಾಲಿಗೆ 20 ಪೈಸೆ ಕೊಡಬೇಕೆಂದು ಹಾಲು ಒಕ್ಕೂಟದವರು ಕೇಳುತ್ತಿದ್ದಾರೆ. ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.

ನಂದಿನಿ ಹಾಲಿನ ದರ ಏರಿಕೆಗೆ ಹೈಕೋರ್ಟ್‌ ಅಸ್ತು: ತಜ್ಞರ ಅನಿಸಿಕೆ, ನಿರ್ದಿಷ್ಟ ನೀತಿಯಂತೆ ಏರಿಕೆ

ಈ ಹಿಂದೆ ಸಹಕಾರ ಸಚಿವ ರಾಜಣ್ಣರವರು ಹಾಲಿನ ದರ ಹೆಚ್ಚಳ ಮಾಡುವಂತೆ ಹೇಳಿದ್ದರು. ಇದಕ್ಕೆ ವಿಪಕ್ಷಗಳು ಲಬಲಬ ಅಂತ ಬಾಯಿ ಬಡಿದುಕೊಂಡರು. ಇದನ್ನು ನೀವು ಜೋರಾಗಿ ಪ್ರಶ್ನೆ ಮಾಡಬೇಕಿತ್ತಲ್ಲವೇ. ಅಷ್ಟಕ್ಕೂ

ಹಾಲಿಗೆ 5 ರುಪಾಯಿ ಪ್ರೋತ್ಸಾಹ ಧನ ಹೆಚ್ಚಳ ಮಾಡಿದ್ದು ಯಾರು. ಕುಮಾರಸ್ವಾಮಿನಾ, ಬೊಮ್ಮಾಯಿನಾ.?

ಪ್ರೋತ್ಸಾಹ ಹಣ ಹೆಚ್ಚಳ ಮಾಡಿದ್ದು ನಾನು. ಸರ್ಕಾರಿ ಶಾಲೆ ಮಕ್ಕಳಿಗೆ ಹಾಲು ಕೊಡಲು ಕ್ಷೀರ ಭಾಗ್ಯ ಕಾರ್ಯಕ್ರಮ ಘೋಷಣೆ ಮಾಡಿದೆ. ಇದರಿಂದ ಹೈನುಗಾರರಿಗೆ ಅನುಕೂಲ ಆಯಿತು. ಹಿಂದಿನ ಸರ್ಕಾರ ಈ ಕೆಲಸ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಮಣ್ಣಿನ ಮಕ್ಕಳು, ರೈತರ ಮಕ್ಕಳು ಈ ಕೆಲಸ ಮಾಡಲಿಲ್ಲ. ನಾವು ಕುರಿಕಾಯುವವರು, ಎಮ್ಮೆ ಕಾಯುವವರು, ಆಹಾರ ಉತ್ಪಾದನೆ ಮಾಡುವವರ ಮಕ್ಕಳು. ಇವರು ಮಾತೆತ್ತಿದರೆ ನಾವು ಮಣ್ಣಿನ ಮಕ್ಕಳು, ಮಣ್ಣಿನ ಮಕ್ಕಳು ಅಂತಾರೆ, ರೈತರಿಗಾಗಿ ಏನು ಮಾಡಿದ್ದಾರೆ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್