ದೇಶದಲ್ಲಿ ಹಿಂದುಗಳ ಸಂಖ್ಯೆ ಕುಸಿತ ಕಳವಳಕಾರಿ: ಪ್ರಲ್ಹಾದ್‌ ಜೋಶಿ

Published : May 11, 2024, 12:43 PM IST
ದೇಶದಲ್ಲಿ ಹಿಂದುಗಳ ಸಂಖ್ಯೆ ಕುಸಿತ ಕಳವಳಕಾರಿ: ಪ್ರಲ್ಹಾದ್‌ ಜೋಶಿ

ಸಾರಾಂಶ

ದೇಶದಲ್ಲಿ ಹಿಂದು ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳ ಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.   

ಹುಬ್ಬಳ್ಳಿ (ಮೇ.11): ದೇಶದಲ್ಲಿ ಹಿಂದು ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳ ಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ಹಿಂದುಗಳ ಜನಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ, ಸಮಗ್ರ ಅಧ್ಯಯನ ನಡೆಸಬೇಕಿದೆ. ಜಗತ್ತಿ ನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ.ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದರು. 

ಇದೇ ವೇಳೆ ಜೋಶಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ತಲ ತಲಾಂತರದಿಂದಲೂ ಒಂದಾಗಿರುವ ದೇಶವನ್ನು ಒಡೆಯುವ ಹುನ್ನಾರ ಮಾಡು ತಿದೆ. ಕಾಂಗ್ರೆಸ್‌ನವರು ದಕ್ಷಿಣ ಭಾರತ, ಉತ್ತರ ಭಾರತ ಎಂದು ಪ್ರತ್ಯೇಕತೆಯ ಮಾತ ನಾಡುತ್ತಿದ್ದಾರೆ. ದಕ್ಷಿಣ ಭಾರತದವರು ಆಫ್ರಿಕನ್ನರ ತರ, ಪೂರ್ವೋತ್ತರ ಭಾರತೀಯರು ಚೀನಿಸ್ ತರ ಕಾಣುತ್ತಾರೆ ಎಂದೆಲ್ಲ ಹೇಳುತ್ತ ದೇಶ ಒಂದಾಗಿಲ್ಲ ಎಂಬ ಸಂದೇಶ ಸಾರುವ ಪ್ರಯತ್ನ ಮಾಡುತ್ತಿದ್ದಾರೆ. ಉತ್ತರದಲ್ಲಿ ಕಾಶಿ ವಿಶ್ವನಾಥನ ದೇವಸ್ಥಾನ ವಿದ್ದರೆ, ದಕ್ಷಿಣದಲ್ಲಿ ರಾಮೇಶ್ವರ ದೇಗುಲವಿದೆ. ಆದರೆ, ಎರಡ ರಲ್ಲೂ ಈಶ್ವರನನ್ನೇ ಕಂಡ ದೇಶ ನಮ್ಮದು. 

ಪ್ರಜ್ವಲ್ ರೇವಣ್ಣ ವಿರುದ್ಧ ಏಕೆ ತಕ್ಷಣಕ್ಕೆ FIR ದಾಖಲಿಸಲಿಲ್ಲ? ಬಂಧಿಸಲಿಲ್ಲ?: ಪ್ರಲ್ಹಾದ್‌ ಜೋಶಿ

ಆದರೆ, ಕಾಂಗ್ರೆಸ್ ದೇಶ ವಿಭಜಿಸುವ ರೀತಿ ಮಾತನಾಡುತ್ತಿದೆ ಎಂದರು. ಮೀರಿ ವರ್ಣ, ಬಣ್ಣ, ಚರ್ಮ ಕಾಂತಿ, ವಿಭಿನ್ನ ಸಂಸ್ಕೃತಿ ಎನ್ನುತ್ತ ಪ್ರತ್ಯೇಕತೆ ಭಾವ ಮೂಡಿ ಸುವುದು ಶೋಭೆ ತರದು. ಜಾತಿ, ಸಂಸ್ಕೃತಿ, ಬಣ್ಣ ಎಲ್ಲವನ್ನೂ ಭಾರತ ಸಾಂಸ್ಕೃತಿಕವಾಗಿ ಬಹು ವಿಶಾಲವಾಗಿದೆ. ಅಫ್ಘಾನಿಸ್ತಾನದವರೆಗೂ ಭಾರತ ವಿಸ್ತಾರವಾಗಿದೆ. ಆದರೂ ಸಾಂಸ್ಕೃತಿಕವಾಗಿ ತಲ ತಲಾಂ ತರದಿಂದಲೂ ಒಂದಾಗೇ ಉಳಿದಿದೆ ಎಂದು ಪ್ರತಿಪಾದಿಸಿದರು. ಭಾರತ ಪ್ರಮುಖವಾಗಿ ಹಿಂದುಗಳ ದೇಶ ವೆಂದರೂ ಸರ್ವ ಧರ್ಮೀಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದುಗಳ ಸಂಖ್ಯೆಯೇ ಕುಸಿಯುತ್ತಿದೆ ಎಂಬುದು ಸರ್ಕಾರ, ಸಮಾಜ ಗಂಭೀರವಾಗಿ ಚಿಂತಿ ಸಬೇಕಾದ ಸಂಗತಿ ಎಂದು ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ