ದೆಹಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ: ತುಮಕೂರಿನಲ್ಲಿ ಶಂಕಿತನ ವಿಚಾರಣೆ, ಯಾರು ಈ ಮುಜಾಯುದ್ದೀನ್?

Published : Nov 13, 2025, 04:56 PM IST
Delhi blast case Tumakuru Mujayuddin terror suspect history

ಸಾರಾಂಶ

ದೆಹಲಿಯ ಕೆಂಪುಕೋಟೆ ಬಳಿಯ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರಿನ ಮುಜಾಯುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಿಂದೆ 'ಕಲಿಫತ್' ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಈತನಿಗೆ, ಪ್ರಸ್ತುತ ಸ್ಫೋಟ ಸಂಬಂಧ ವಿಚಾರಣೆ ನಡೆಸಿ ಬಿಟ್ಟುಕಳಿಸಲಾಗಿದೆ.

ತುಮಕೂರು(ನ.13): ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತುಮಕೂರು ಜಿಲ್ಲೆಯ PH ಕಾಲೋನಿ ನಿವಾಸಿ ಮುಜಾಯುದ್ದೀನ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಸ್ಫೋಟ ನಡೆದ ಮರುದಿನವೇ ಈ ವಿಚಾರಣೆ ನಡೆದಿದ್ದು, ಘಟನೆಯಲ್ಲಿ ಭಾಗಿಯಾಗಿ ಎಂಬುದು ಖಾತರಿ ಹಿನ್ನೆಲೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು ವಿಚಾರಣೆ ಬಳಿಕ ಬಿಟ್ಟು ಕಳಿಸಿದ್ದಾರೆ.

ದೆಹಲಿ ಸ್ಫೋಟ ಬಳಿಕ ಅಲರ್ಟ್ ಆಗಿರುವ ರಾಜ್ಯ ಪೊಲೀಸರು, ಎಲ್ಲಾ ಸಂಶಯಾಸ್ಪದ ವ್ಯಕ್ತಿಗಳ ಮೇಲೆ 'ಖಾಕಿ ಡ್ರಿಲ್' ನಡೆಸುತ್ತಿದ್ದಾರೆ. ಈ ಸರಣಿಯ ಭಾಗವಾಗಿ, ಮುಜಾಯುದ್ದೀನ್ ಅವರನ್ನು ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು ಗಂಟೆಗಳ ಕಾಲ ತೀವ್ರ ವಿಚಾರಣೆಗೊಳಪಡಿಸಲಾಯಿತು. ವಿಚಾರಣೆಯನ್ನು ನಡೆಸಿದ ಎಸ್‌ಪಿ ಪುರುಷೋತ್ತಮ್ ಅವರು, ಮುಜಾಯುದ್ದೀನ್ ಅವರಿಗೆ ದೆಹಲಿ ಸ್ಫೋಟದಲ್ಲಿ ಯಾವುದೇ ಕೈವಾಡ ಇಲ್ಲ. ತೀವ್ರ ವಿಚಾರಣೆ ನಂತರ ಬಿಟ್ಟುಕಳುಹಿಸಲಾಗಿದೆ.

ಯಾರು ಈ ಮುಜಾಯುದ್ದೀನ್‌ನ?

ಮುಜಾಯುದ್ದೀನ್ ತುಮಕೂರಿನ PH ಕಾಲೋನಿ ನಿವಾಸಿಯಾಗಿದ್ದಾರೆ. ಹಿಂದೆ 'ಕಲಿಫತ್' ಎಂಬ ಉಗ್ರವಾದಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಆರೋಪಿ, ಈ ಸಂಘಟನೆಯ ಮುಖ್ಯಸ್ಥರಿಗೆ ತುಮಕೂರಿನಲ್ಲಿ ಸಭೆಗಳನ್ನು ಆಯೋಜಿಸುವಲ್ಲಿ ಅವರು ಸಹಾಯ ಮಾಡಿದ್ದರು ಎಂದು ಆರೋಪವಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ತಪಾಸಣೆ ಏಜೆನ್ಸಿ (ಎನ್‌ಐಎ) ಅವರನ್ನು ಬಂಧಿಸಿ, ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿತ್ತು. ಆರು ವರ್ಷಗಳ ಶಿಕ್ಷೆಯನ್ನು ಅನುಭವಿಸಿ, ತಿಹಾರ್ ಜೈಲಿನಿಂದ ಹೊರಬಂದಿದ್ದ. ಈ ಹಿನ್ನೆಲೆಯಲ್ಲಿ ದೆಹಲಿ ಸ್ಫೋಟದ ಮರುದಿನ ಪೊಲೀಸರು ಮತ್ತೆ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ಆದರೆ ವಿಚಾರಣೆಯಲ್ಲಿ ಯಾವುದೇ ಸಂಶಯಾಸ್ಪದ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಬಿಟ್ಟುಕಳಿಸಿದ್ದಾರೆ.

ದೆಹಲಿ ಸ್ಫೋಟದ ಸಂಕ್ಷಿಪ್ತ ಮಾಹಿತಿ:

ನವೆಂಬರ್ 12 ರಂದು ದೆಹಲಿಯ ಜನನಿಬಿಡ ಮಾರುಕಟ್ಟೆಯಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಹಲವು ಜನರು ಮೃತಪಟ್ಟಿದ್ದರು, ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಆಂತರಿಕ ಭಯೋತ್ಪಾದಕ ಗುಂಪುಗಳ ಕೈ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆ ರಾಷ್ಟ್ರೀಯ ಮಟ್ಟದಲ್ಲಿ ಈಗ ತೀವ್ರ ತಪಾಸಣೆ ನಡೆಯುತ್ತಿದ್ದು, ಕರ್ನಾಟಕ ಪೊಲೀಸ್ ಸಹ ಸ್ಥಳೀಯ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!
ಬಾರ್ ಆಗಿ ಮಾರ್ಪಟ್ಟ KSRTC ಬಸ್: ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!