ಡಿಕೆಶಿ ತಾಯಿ ಮನವಿಗೆ ಕೋರ್ಟ್ ಓಕೆ: ರಾಮನಗರ SPಗೆ ಮಹತ್ವದ ಸೂಚನೆ

Published : Dec 18, 2019, 03:46 PM ISTUpdated : Dec 18, 2019, 07:08 PM IST
ಡಿಕೆಶಿ ತಾಯಿ ಮನವಿಗೆ ಕೋರ್ಟ್ ಓಕೆ: ರಾಮನಗರ SPಗೆ ಮಹತ್ವದ ಸೂಚನೆ

ಸಾರಾಂಶ

ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ಪ್ರಕರಣದಲ್ಲಿ ಗೌರಮ್ಮ ಮನವಿಯನ್ನು ಕೋರ್ಟ್ ಪುರಸ್ಕರಿಸಿದ್ದು, ಡಿಕೆಶಿ ತಾಯಿ ಮನವಿಗೆ ದೆಹಲಿ ಹೈಕೋರ್ಟ್ ಸಮ್ಮತಿಸಿದೆ. ಏನದು ಮನವಿ..? ಕೋರ್ಟ್ ಹೇಳಿದ್ದೇನು..?

ನವದೆಹಲಿ/ಬೆಂಗಳೂರು, (ಡಿ.18): ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಸಿಕ್ಕ ಎನ್ನಲಾದ ಅಕ್ರಮ ಹಣ ಪ್ರಕರಣದಲ್ಲಿ ಮನೆಯಲ್ಲಿ ಗೌರಮ್ಮನ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ತಿಳಿಸಿದೆ.

"

85 ವಯಸ್ಸು ಆಗಿರುವುದರಿಂದ ಮನೆಯಲ್ಲಿಯೇ ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಗೌರಮ್ಮ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಡಿಕೆಶಿ ಕುಟುಂಬ ಚಾಪೆ ಕೆಳಗೆ ತೂರಿದ್ರೆ, ರಂಗೋಲಿ ಕೆಳಗೆ ತೂರಿದ ಇಡಿ..!

ಇಂದು (ಬುಧವಾರ) ಈ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಗೌರಮ್ಮ ಮನವಿ ಪುರಸ್ಕರಿಸಿದ ಹೈಕೋರ್ಟ್, ಕನಕಪುರದ  ಮನೆಯಲ್ಲಿಯೇ ವಿಚರಣೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ.

 ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್‌ ಅವರ ತಾಯಿ ಗೌರಮ್ಮ ಅವರ ವಿಚಾರಣೆಯನ್ನು ಕನಕಪುರದಲ್ಲಿರುವ ಅವರ ನಿವಾಸದಲ್ಲಿಯೇ ವಿಚಾರಣೆ ನಡೆಸಿ ಎಂದು ಇಡಿ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.

ಅಷ್ಟೇ ಅಲ್ಲದೇ ಕನ್ನಡದಲ್ಲಿಯೇ ವಿಚಾರಣೆ ನಡೆಸಬೇಕು. ಜತೆಗೆ ವಿಚಾರಣೆಯ ಆಡಿಯೋ ರೇಕಾರ್ಡ್ ಮಾಡಬೇಕೆಂದು ಇಡಿ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಇನ್ನು ಇಡಿ ಅಧಿಕಾರಿಗಳ ವಿಚಾರಣೆಗೆ ಯಾವುದೇ ಅಡ್ಡಿಪಡಿಸುವಂತಿಲ್ಲ. ಯಾವುದೇ ಪ್ರತಿಭಟನೆ ಮಾಡುವಂತಿಲ್ಲ . ಹೀಗಾಗಿ ಇಡಿ ಅಧಿಕಾರಿಗಳಿಗೆ ಭದ್ರತೆ ನೀಡುವಂತೆ ರಾಮನಗರ ಪೊಲೀಸ್‌ ವರಿಷ್ಠಾಧಿಕಾರಿಗೆ (SP)ಕೋರ್ಟ್ ಸೂಚನೆ ನೀಡಿದೆ.

ಡಿಸೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!