ಕಲಬುರ್ಗಿ- ಮಂಗಳೂರು ವಿಮಾನ ಸಂಚಾರ ನಿತ್ಯ ಪ್ರಾರಂಭಿಸಲು ಒತ್ತಾಯ

Published : Jul 23, 2023, 07:46 PM IST
ಕಲಬುರ್ಗಿ- ಮಂಗಳೂರು ವಿಮಾನ ಸಂಚಾರ ನಿತ್ಯ  ಪ್ರಾರಂಭಿಸಲು ಒತ್ತಾಯ

ಸಾರಾಂಶ

ನಿತ್ಯ ವಿಮಾನ ಹಾರಾಟಕ್ಕೆ ದಕ್ಷಿಣ ಕನ್ನಡ ಸಂಘ ಹರ್ಷ  ವ್ಯಕ್ತಪಡಿಸಿದೆ. ಇದರ ಜೊತೆಗೆ ಮಂಗಳೂರಿಗೆ ವಿಮಾನ ಸಂಚಾರ ಕೂಡಲೇ ಪ್ರಾರಂಭಿಸುವಂತೆ ಒತ್ತಾಯಿಸಿದೆ.

ಕಲಬುರಗಿ (ಜು.23): ಉಡಾನ್‌ ಯೋಜನೆ ಅಡಿಯಲ್ಲಿ ಪ್ರಾರಂಭವಾದ ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಇದೀಗ ಬೆಂಗಳೂರಿಗೆ ನಿತ್ಯ ವಿಮಾನ ಸಂಚಾರ ಪ್ರಾರಂಭವಾಗಿರುವುದು ದಕ್ಷಿಣ ಕನ್ನಡ ಸಂಘ ಹರ್ಷ ವ್ಯಕ್ತಪಡಿಸಿದೆ ಹಾಗೂ ಮಂಗಳೂರಿಗೆ ವಿಮಾನ ಸಂಚಾರ ಕೂಡಲೇ ಪ್ರಾರಂಭಿಸುವಂತೆ ಒತ್ತಾಯಿಸಿದೆ.

ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ನಿತ್ಯ ವಿಮಾನ ಹಾರಾಟವನ್ನು ಕಡಿತಗೊಳಿಸಿ ಪರಿಣಾಮವಾಗಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿತ್ತು. ಇದೀಗ ನಿತ್ಯ ವಿಮಾನ ಹಾರಾಟ ಆರಂಭದಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಅಭಿವೃದ್ಧಿಗೆ ನೆರವಾಗಲಿದೆ. ಕೂಡಲೇ ಕಲಬುರ್ಗಿ- ಮಂಗಳೂರು ಮಧ್ಯೆ ಬೆಂಗಳೂರು ಮಾರ್ಗವಾಗಿ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಕ್ರಮ ವಹಿಸಲಿ ಎಂದು ಸಂಘದ ಅಧ್ಯಕ್ಷ ಡಾ. ಸದಾನಂದ ಪೆರ್ಲ ಒತ್ತಾಯಿಸಿದ್ದಾರೆ.

ಐಟಿ ಉದ್ಯೋಗ ತೊರೆದು ಸ್ಟಾಂಡ್‌ ಅಪ್ ಕಾಮಿಡಿಯನ್ ಆದ ಈತನ ವಾರ್ಷಿಕ ದುಡಿಮೆ 1 ಕೋಟಿ!

ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ಮಾಡಲು ಭಾರತೀಯ ಪ್ರಾಧಿಕಾರವು ಗ್ರೀನ್‌ ಸಿಗ್ನಲ್‌ ನೀಡಿ ಈಗಾಗಲೇ ತಿಂಗಳು ಕಳೆದಿದೆ. ಮಂಗಳೂರು ವಿಮಾನ ನಿಲ್ದಾಣವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿರುವುದರಿಂದ ಹಗಲು ಹೊತ್ತಿನಲ್ಲಿ ವಿಮಾನ ಇಳಿಯಲು ಅನುಕೂಲಕರ ವೇಳೆ ಇಲ್ಲದಿರುವುದರಿಂದ ರಾತ್ರಿ ವೇಳೆ ವಿಮಾನ ಸಂಚಾರ ಸುಗಮವಾಗಿ ಪ್ರಾರಂಭಿಸಲು ಅವಕಾಶವಿದ್ದು, ಇದಕ್ಕೆ ತಕ್ಷಣ ಕೇಂದ್ರ ನಾಗರಿಕ ವಿಮಾನ ಇಲಾಖೆ ಕ್ರಮವಹಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ. ಈಗಾಗಲೇ ಕೇಂದ್ರವು ಖಾಸಗಿ ವಿಮಾನ ಸಂಸ್ಥೆಗಳ ಜೊತೆ ಮಾತುಕತೆ ನಡೆಸಿದೆ ಮತ್ತು ಮೂರು ತಿಂಗಳ ಒಳಗೆ ರಾತ್ರಿ ವಿಮಾನ ಸಂಚಾರ ಪ್ರಾರಂಭಿಸುವುದಾಗಿ ಮಾಹಿತಿ ಇದ್ದು ತಕ್ಷಣದಲ್ಲಿ ಪ್ರಾರಂಭಿಸಿದರೆ ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ವಿದೇಶಿ ಕಂಪೆನಿಗಳಿಂದ 1 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಪಡೆದ ಐಐಐಟಿ ಐವರು ವಿದ್ಯಾರ್ಥಿಗಳು!

ಕಲ್ಬುರ್ಗಿಯಿಂದ ನಿತ್ಯ ಆರು ಖಾಸಗಿ ಬಸ್‌ಗಳು ಮಂಗಳೂರಿಗೆ ಸಂಚರಿಸುತ್ತಿದೆ. ಈ ಭಾಗದಿಂದ ಶಿಕ್ಷಣ, ವ್ಯಾಪಾರ, ಪ್ರವಾಸ ಕ್ಕಾಗಿ ಕರಾವಳಿ ಜಿಲ್ಲೆಗಳಿಗೆ ಮತ್ತು ಪಕ್ಕದ ಕೇರಳದ ಕಣ್ಣೂರು, ಕಲ್ಲಿಕೋಟೆ, ಮುಂತಾದಡೆಗಳಿಗೆ ಕಲ್ಯಾಣ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದ ಗಡಿ ಜಿಲ್ಲೆಗಳಿಂದ ಪ್ರಯಾಣಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಮಾನ ಸಂಚಾರ ಅತ್ಯಗತ್ಯವಾಗಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಲಬುರ್ಗಿ ಲೋಕಸಭಾ ಸದಸ್ಯರಾದ ಉಮೇಶ್‌ ಜಾಧವ್‌ ಮತ್ತು ಮಂಗಳೂರು ಸಂಸದರಾದ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಸಂಘವು ಈಗಾಗಲೇ ಒತ್ತಾಯಿಸಿದ್ದು ತಕ್ಷಣದ ಕ್ರಮ ಕೈಗೊಳ್ಳುವಂತೆ ಬೇಡಿಕೆ ಇಟ್ಟಿದೆ ಎಂದು ಡಾ. ಪೆರ್ಲ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!