ಡಿಕೆಶಿ ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಗುತ್ತಿಗೆದಾರ ಹೇಮಂತ್ ಸವಾಲು!

Published : Aug 08, 2023, 11:58 AM IST
ಡಿಕೆಶಿ ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಗುತ್ತಿಗೆದಾರ ಹೇಮಂತ್ ಸವಾಲು!

ಸಾರಾಂಶ

ಬಿಬಿಎಂಪಿ ಗುತ್ತಿಗೆದಾರ ಬಾಕಿ ಬಿಲ್ ಕೊಡಲು ಹಣಕ್ಕೆ ಬೇಡಿಕೆ‌ ಇಟ್ಟರಾ ಡಿಸಿಎಂ ಡಿಕೆ ಶಿವಕುಮಾರ್? ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಿಬಿಎಂಪಿ ಗುತ್ತಿಗೆದಾರ ಹೇಮಂತ್ ಹಾಕಿರುವ ಸವಾಲು ಇದೀಗ ಭಾರೀ ವೈರಲ್ ಆಗಿದೆ.

ಬೆಂಗಳೂರು (ಆ.8) : ಬಿಬಿಎಂಪಿ ಗುತ್ತಿಗೆದಾರ ಬಾಕಿ ಬಿಲ್ ಕೊಡಲು ಹಣಕ್ಕೆ ಬೇಡಿಕೆ‌ ಇಟ್ಟರಾ ಡಿಸಿಎಂ ಡಿಕೆ ಶಿವಕುಮಾರ್? ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಿಬಿಎಂಪಿ ಗುತ್ತಿಗೆದಾರ ಹೇಮಂತ್ ಹಾಕಿರುವ ಸವಾಲು ಇದೀಗ ಭಾರೀ ವೈರಲ್(Viral video) ಆಗಿದೆ.

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ನಿನ್ನೆ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷಷ್ಠಿಯಲ್ಲಿ ಮಾತನಾಡಿರುವ ಹೇಮಂತ್, ಡಿಕೆಶಿ ಹಣಕ್ಕೆ ಬೇಡಿಕೆ ಇಟ್ಟಿಲ್ಲ ಎಂದರೆ ಅವರು ನಂಬಿರುವ ಅಜ್ಜಯ್ಯನ ಮಠಕ್ಕೆ ಪ್ರಮಾಣ ಮಾಡಲಿ. ಅವರು ಹಣ ಕೇಳಿದ್ದಾರೆ ಎಂದು ನಾನು‌‌ ಪ್ರಮಾಣ ಮಾಡುತ್ತೇನೆ ಎಂದು ಸವಾಲು ಹಾಕಿದ್ದರು.

ಸರಿಯಾದ ಕಾಮಗಾರಿಗೆ ಮಾತ್ರ ಹಣ: ಡಿಸಿಎಂ ಸ್ಪಷ್ಟನೆ

ನ್ಯಾಯಯುತವಾಗಿ ಕೆಲಸ ಮಾಡಿದ್ದೇವೆ. ಕಮಿಷನರ್ ಮೇಲೆ ಯಾಕೆ ಆರೋಪ ಮಾಡ್ತಿರಾ? ಇಷ್ಟು ದಿನ ಅವರೇ ಅಲ್ವಾ ಬಿಲ್  ಪಾವತಿ ಮಾಡ್ತಿದ್ದುದು? ಈಗ ಯಾಕೆ ಅವರು ಬಿಲ್ ತಡೆಯುತ್ತಾರೆ?  ಅವರಿಗೆ ಬಿಲ್ ತಡೆಹಿಡಿಯುವಂತೆ ಹೇಳಿರೋದು ಯಾರು ಅವರ ಬಗ್ಗೆ ಮಾತನಾಡಿ ಎಂದು ಆಗ್ರಹಿಸಿರುವ ಗುತ್ತಿಗೆದಾರ ಸಂಘದ ಸದಸ್ಯ ಹೇಮಂತ್.

ಈಗ ಸಮಿತಿ ಮಾಡಿದ್ದಾರೆ, ಬಿಲ್  ಸ್ಯಾಂಕ್ಷನ್ ಮಾಡಿಸಿಕೊಳ್ಳುತ್ತೀರಾ..? ನಾವೇನು ಕಳ್ಳತನ ಮಾಡಿಲ್ಲ, ನಡೀರಿ ಕೋರ್ಟ್ ಗೆ ಹೋಗೋಣ. ಅಲ್ಲೇ ವಾದ ನಡೆಯಲಿ. ನಾನು ಕೂಡ ಕಾಂಗ್ರೆಸ್ ಗೆ ಓಟ್ ಹಾಕಿದವನು. ಪ್ರಮಾಣಿಕವಾಗಿ ಕೆಲಸ ಮಾಡಿದ್ದೇನೆ.  94 ಕೋಟಿ ರೂ. ಬಿಲ್ ಬಾಕಿ ಬಿಲ್ ಬರಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗುತ್ತಿಗೆದಾರ ಹೇಮಂತ. ಆಕ್ರೋಶ ಮಾತುಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಡಿಕೆಶಿ ಸವಾಲು ಸ್ವೀಕರಿಸಿ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡುತ್ತಾರಾ? ಕಾದು ನೋಡಬೇಕು.

ಪಾಲಿಕೆ ಬಾಕಿ ಬಿಲ್ ವಿಳಂಬ: ಎಚ್‌ಡಿಕೆ ಮುಂದೆ ಬಿಬಿಎಂಪಿ ಗುತ್ತಿಗೆದಾರರ ಅಳಲು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!