ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಘೀ ಪ್ರಕರಣ: ಮಳೆ ಜೋರಾದರೂ ಇಳಿಯದ ಸೋಂಕು

Published : Jul 29, 2024, 07:56 AM IST
ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಘೀ ಪ್ರಕರಣ: ಮಳೆ ಜೋರಾದರೂ ಇಳಿಯದ ಸೋಂಕು

ಸಾರಾಂಶ

ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ. ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ.

ಬೆಂಗಳೂರು (ಜು.29): ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ. ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ. ಈ ಪೈಕಿ 320 ಮಂದಿಗೆ ಡೆಂಘೀ ಖಚಿತಪಟ್ಟಿದ್ದು, ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 17,227ಕ್ಕೆ ಏರಿಕೆಯಾಗಿದೆ. ಭಾನುವಾರದ ಪ್ರಕರಣ ಸೇರಿ 3,004 ಮಂದಿ ಸಕ್ರಿಯ ಡೆಂಘೀ ರೋಗಿಗಳು ಚಿಕಿತ್ಸೆ ಯಲ್ಲಿದ್ದಾರೆ. ಈ ಪೈ 2,539 ಮಂದಿ ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ. 

465 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇದರಲ್ಲಿ 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಂಗಳೂರು ನಗರದಲ್ಲಿ 142, ಬೆಳಗಾವಿ 21, ಹಾವೇರಿ, ದಾವಣಗೆರೆ ತಲಾ 17, ರಾಮನಗರ 15, ಕಲಬುರಗಿ 13 ಪ್ರಕರಣ ದೃಢಪಟ್ಟಿವೆ. ತುಮಕೂರು 9, ದಕ್ಷಿಣ ಕನ್ನಡ 7, ಮಂಡ್ಯ 6, ಚಿಕ್ಕಬಳ್ಳಾಪುರ 5, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ತಲಾ 4, ಚಾಮರಾಜನಗರ, ಬಾಗಲ ಕೋಟೆ, ವಿಜಯಪುರ ತಲಾ 3, ಧಾರವಾಡ, ಯಾದಗಿರಿ, ಬೀದರ್, ರಾಯಚೂರು ತಲಾ 2, ಕೊಡಗು, ಚಿಕ್ಕಮಗಳೂರು, ಕೊಪ್ಪಳ, ಉತ್ತರ ಕನ್ನಡ, ಗದಗ, ಕೋಲಾರ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ದೃಢಪಟ್ಟಿದೆ.

ಡೆಂಘೀ ಕುರಿತ ಮಾಹಿತಿಗೆ ಉಚಿತ ಸಹಾಯವಾಣಿ: 1800 4258330 ಸಂಪರ್ಕಿಸಬಹುದು

ನ್ಯಾಮತಿಯಲ್ಲಿ ಸ್ವಚ್ಛತೆ ಕಾಪಾಡಲು ಪಪಂ ಸೂಚನೆ: ಡೆಂಘೀಜ್ವರ ತಡೆಗಟ್ಟುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಲೀಕರು ತಮ್ಮ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಳು, ಜಾಲಿ ಗಿಡಗಳನ್ನು, ತ್ಯಾಜ್ಯವನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ತಿಳಿಸಿದ್ದಾರೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಕಡೆ ಖಾಲಿ ನಿವೇಶನಗಳಿವೆ. ಅವುಗಳಲ್ಲಿ ಕಳೆಗಿಡಗಳು ಬೆಳೆದಿವೆ. ಮನಬಂದಂತೆ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಇದರಿಂದ ಕೊಳಚೆ ನೀರು ಸೃಷ್ಟಿಯಾಗಿ, ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. 

ವಾಲ್ಮೀಕಿ, ಮುಡಾ ಅಕ್ರಮ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆ.3ರಿಂದ ಬಿಜೆಪಿ-ಜೆಡಿಎಸ್ 7 ದಿನಗಳ ಪಾದಯಾತ್ರೆ

ಈಗ ಮಳೆಗಾಲವಾಗಿದ್ದು, ಕೊಳಕು ನೀರು ನಿಂತು ಡೆಂಘೀಜ್ವರ, ಮಲೇರಿಯಾ, ಚಿಕೂನ್‌ ಗುನ್ಯಾದಂಥ ರೋಗಗಳು ಜನರನ್ನು ಕಾಡುತ್ತಿವೆ. ಈ ಹಿನ್ನೆಲೆ ನಿವೇಶನಗಳ ಮಾಲೀಕರು, ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ. ಖಾಲಿ ನಿವೇಶನಗಳ ಮಾಲೀಕರು ವಾರದೊಳಗೆ ನಿವೇಶನಗಳಲ್ಲಿಯ ತ್ಯಾಜ್ಯವಸ್ತು, ಗಿಡಗಳನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಮೂಲಕ ಮತ್ತು ಜೆಸಿಬಿ ಬಾಡಿಗೆ ಪಡೆದು ಸ್ವಚ್ಛಗೊಳಿಸಿ, ಅದಕ್ಕೆ ತಗಲಿದ ವೆಚ್ಚವನ್ನು ಮಾಲೀಕರಿಂದಲೇ ವಸೂಲು ಮಾಡಲಾಗುವುದು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ