ಇಂದಿನಿಂದ 4 ದಿನ ಭಾರೀ ಮಳೆ ಸಾಧ್ಯತೆ

Kannadaprabha News   | Asianet News
Published : Sep 02, 2020, 09:44 AM IST
ಇಂದಿನಿಂದ 4 ದಿನ ಭಾರೀ ಮಳೆ ಸಾಧ್ಯತೆ

ಸಾರಾಂಶ

ರಾಜ್ಯಾದ್ಯಂತ ಸೆ. 2 ರಿಂದ 5ರವರೆಗೆ ಮುಂಗಾರು ಮತ್ತೆ ಆರ್ಭಟ|  ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ ಬೀಳುವ ಸಾಧ್ಯತೆ| ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ| 

ಬೆಂಗಳೂರು(ಸೆ.02): ರಾಜ್ಯಾದ್ಯಂತ ಸೆ. 2 ರಿಂದ 5ರವರೆಗೆ ಮುಂಗಾರು ಮತ್ತೆ ಆರ್ಭಟಿಸಲಿದ್ದು, ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಸೆ.3 ಮತ್ತು 4 ರಂದು ಅತೀ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಸೆ. 3ರಿಂದ 5 ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸೆ. 2ರಿಂದ 5 ರವರೆಗೆ ವ್ಯಾಪಕ ಮಳೆ ಬೀಳುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಇದೇ ವೇಳೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಹೆಚ್ಚು ಮಳೆಯಾಗುವ ಸಂಭವವಿದೆ. ಈ ವೇಳೆ ಉಷ್ಣಾಂಶ ಗರಿಷ್ಠ 30ರಿಂದ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು : ಇನ್ನೂ ಎರಡು ದಿನ ಅಬ್ಬರ

ಎಲ್ಲೆಲ್ಲಿ ಮಳೆ?:

ಸೆ.1ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು 9 ಸೆಂ.ಮೀ, ಚಾಮರಾಜನಗರದ ಬೇಗೂರು 7, ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ಮತ್ತು ಮಂಡ್ಯದ ಮಳವಳ್ಳಿ ತಲಾ 7, ಚಾಮರಾಜನಗರ 6, ಮಂಡ್ಯ, ತುಮಕೂರು ಜಿಲ್ಲೆಯ ತಿಪಟೂರು 5, ಕೋಲಾರದ ಮಾಲೂರು, ಮೈಸೂರಿನ ಸರಗೂರು, ಮಂಡ್ಯದ ಮದ್ದೂರಿನಲ್ಲಿ 4 ಸೆಂ.ಮೀ ಮಳೆ ಬಿದ್ದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್