ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಿಡಿಕಾರಿದ ಉಪ ಲೋಕಾಯುಕ್ತ ಫಣೀಂದ್ರ

Published : Oct 24, 2024, 01:24 PM IST
ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಿಡಿಕಾರಿದ ಉಪ ಲೋಕಾಯುಕ್ತ ಫಣೀಂದ್ರ

ಸಾರಾಂಶ

ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದ್ದಾರೆ. ಸರ್ಕಾರಿ ನೌಕರರು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ಕರ್ತವ್ಯ ನಿರ್ವಹಿಸಬೇಕು. ಲೋಕಾಯುಕ್ತ ಸಂಸ್ಥೆಯು ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯನಿರ್ವಹಿಸುತ್ತದೆ.

ಬೆಂಗಳೂರು (ಅ.24): ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ ಕರ್ತವ್ಯದಲ್ಲಿ ಸತ್ಯ, ನಿಷ್ಠೆ ಹಾಗೂ ಸಮಗ್ರತೆಯನ್ನು ಪ್ರದರ್ಶಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು, ಎಂದು ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.

ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಮತ್ತು ಬೆಂಗಳೂರು ಪೂರ್ವ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆ, ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ಉದ್ಘಾಟಿಸಿ  ಮಾತನಾಡಿದರು. ರಾಜ್ಯ ಸರ್ಕಾರ ನೀಡುವ ಸವಲತ್ತುಗಳನ್ನು ಪಡೆಯುವ ಹಕ್ಕು ಎಲ್ಲ ನಾಗರೀಕರಿಗೆ ಇದೆ. ಎಲ್ಲರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಜನರಿಗೆ ಸರ್ಕಾರದ ಸೌಕರ್ಯಗಳು ಸಿಗದೇ ಇದ್ದಲ್ಲಿ, ಆ ಸೌಲಭ್ಯಗಳನ್ನು ಕೊಡಿಸುವ ಕೆಲಸವನ್ನು ಸಂಸ್ಥೆ ಮಾಡುತ್ತದೆ ಎಂದು  ಹೇಳಿದರು.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಫೋನ್‌ ಬಳಸಿದ ನಟ ದರ್ಶನ್; ವಿಡಿಯೋ ಕಾಲ್ ಕೇಸಿನಲ್ಲಿ ದಾಸನಿಗೆ ಬಿಗ್ ರಿಲೀಫ್!

ಜನರ ಕುಂದುಕೊರತೆಗಳನ್ನು ಬಗೆಹರಿಸುವುದು, ಭ್ರಷ್ಟಾಚಾರ ನಿರ್ಮೂಲನೆ, ನಿಗ್ರಹ ಮಾಡುವುದು ಲೋಕಾಯುಕ್ತ ಸಂಸ್ಥೆಯ ಕಾರ್ಯೋದ್ದೇಶ. ಸರ್ಕಾರದ ಸವಲತ್ತುಗಳು ಜನರಿಗೆ ತಲುಪುತ್ತಿದೆಯೇ? ಎಲ್ಲಿ ಕೆಲಸ ಆಗುತ್ತಿಲ್ಲ? ಯಾವ ಕೆಲಸ ವಿಳಂಬವಾಗುತ್ತಿದೆ ಎಂಬುದನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸುವ ಕೆಲಸವನ್ನು ನಾವು ಮಾಡುತ್ತೇವೆ. ಒಂದು ವೇಳೆ ಸೌಕರ್ಯ ನೀಡುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಕರ್ತವ್ಯಲೋಪ ಎಸಗಿದರೆ, ದುರ್ನಡತೆ ಪ್ರದರ್ಶಿಸಿದರೆ ಅವರ ವಿರುದ್ಧ ಸೂಕ್ತ ಕ್ರಮ  ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಈ ಕಾಯ್ದೆ ಅಡಿಯಲ್ಲಿ  ದೂರು ಸಲ್ಲಿಸಿದ ಕೂಡಲೆ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವುದಿಲ್ಲ. ಸೂಕ್ತ ವಿಚಾರಣೆಯನ್ನು ನಡೆಸಿ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ಅಧಿಕಾರಿಗಳಿಗೆ ಸಾಕಷ್ಟು ಅವಕಾಶವನ್ನು ನೀಡಲಾಗುವುದು. ಅಲ್ಲದೆ ದೂರುದಾರರು ಸುಳ್ಳು ಆರೋಪವನ್ನು ನೀಡಿದಲ್ಲಿ ಅಂತಹ ಪ್ರಕರಣಗಳಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನೂ ಸಹ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಹಲವಾರು ವಲಯಗಳಲ್ಲಿ ಸಾರ್ವಜನಿಕರಿಗೆ ತಮ್ಮ ಹಕ್ಕುಗಳ ಬಗ್ಗೆ ಸಾಕಷ್ಟು ಅರಿವು ಇಲ್ಲದಿರುವ ಕಾರಣ ಇಂತಹ ಕುಂದು ಕೊರತೆ  ಅಹವಾಲು ಸ್ವೀಕಾರ ಕಾರ್ಯಕ್ರಮಗಳು ಅವಶ್ಯಕವಾಗಿವೆ. ಇದರ ಸಂಪೂರ್ಣ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಗೌರವಾನ್ವಿತ  ಕರ್ನಾಟಕ ಉಪಲೋಕಾಯುಕ್ತರಾದ ಬಿ ವೀರಪ್ಪ ಅವರು ಮಾತನಾಡಿ ರಾಷ್ಟ್ರದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಸಮಾಜದ ತಪ್ಪುಗಳನ್ನು ತಿದ್ದಲು ಸಾಧ್ಯ. ತನ್ಮೂಲಕ ಪ್ರಾಮಾಣಿಕ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು.

ಇದನ್ನೂ ಓದಿ: ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಜಿಲ್ಲಾಧಿಕಾರಿಗಳಾದ ಜಿ. ಜಗದೀಶ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ.ಎಸ್ ಲತಾ ಕುಮಾರಿ, ಬೆಂಗಳೂರು ನಗರ ಈಶಾನ್ಯ ವಿಭಾಗದ ಉಪ ಪೋಲಿಸ್ ಆಯುಕ್ತರಾದ ಸಜೀತ್ ವಿ.ಜೆ, ಯಲಹಂಕ ವಲಯದ ಬಿಬಿಎಂಪಿ ವಲಯ ಆಯುಕ್ತ ಕರೀಗೌಡ ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!