ವಿದೇಶಿಗರ ಅಕ್ರಮ ವಾಸದ 28 ಹಾಟ್‌ಸ್ಟಾಟ್‌ ಪತ್ತೆ-ಪರಂ

Published : Dec 08, 2023, 06:15 AM IST
ವಿದೇಶಿಗರ ಅಕ್ರಮ ವಾಸದ 28 ಹಾಟ್‌ಸ್ಟಾಟ್‌ ಪತ್ತೆ-ಪರಂ

ಸಾರಾಂಶ

ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಸೇರಿದಂತೆ ಅಕ್ರಮವಾಗಿ ವಾಸ ಮಾಡುತ್ತಿರುವವರನ್ನು ಪತ್ತೆ ಹಚ್ಚಲು ಹಲವು ಕ್ರಮ ಕೈಗೊಂಡಿದ್ದು, ಕಳೆದ 45 ದಿನಗಳಲ್ಲಿ 5729 ಮನೆಗಳಿಗೆ ಭೇಟಿ ನೀಡಿ, ವಿದೇಶಿಗರು ವಾಸಿಸುವ 28 ಹಾಟ್‌ ಸ್ಪಾಟ್‌ ಗುರುತಿಸಲಾಗಿದೆ. ಇದೇ ವೇಳೆ 10371 ಆಧಾರ್‌ ಕಾರ್ಡ್‌ ಪರಿಶೀಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ವಿಧಾನ ಪರಿಷತ್‌ (ಡಿ.8) :  ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಸೇರಿದಂತೆ ಅಕ್ರಮವಾಗಿ ವಾಸ ಮಾಡುತ್ತಿರುವವರನ್ನು ಪತ್ತೆ ಹಚ್ಚಲು ಹಲವು ಕ್ರಮ ಕೈಗೊಂಡಿದ್ದು, ಕಳೆದ 45 ದಿನಗಳಲ್ಲಿ 5729 ಮನೆಗಳಿಗೆ ಭೇಟಿ ನೀಡಿ, ವಿದೇಶಿಗರು ವಾಸಿಸುವ 28 ಹಾಟ್‌ ಸ್ಪಾಟ್‌ ಗುರುತಿಸಲಾಗಿದೆ. ಇದೇ ವೇಳೆ 10371 ಆಧಾರ್‌ ಕಾರ್ಡ್‌ ಪರಿಶೀಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ಕಾಂಗ್ರೆಸ್‌ನ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಂಗ್ಲಾ ವಲಸಿಗರ ಪತ್ತೆಗೆ ನಮ್ಮ ಗುಪ್ತ ದಳ ಜಾಗೃತಗೊಳಿಸಲಾಗಿದೆ, ಹೊಸದಾಗಿ ಕಂಡು ಬರುವ ಬೇರೆ ಭಾಷಿಕರನ್ನು ಗುರುತಿಸಿ, ಅವರ ಪಾಸ್‌ ಪೋರ್ಟ್‌ ಪರಿಶೀಲಿಸಿ ಪತ್ತೆ ಹಚ್ಚಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ ಅಕ್ರಮ ಬಾಂಗ್ಲಾ ಮತ್ತು ವಿದೇಶಿಯರ ವಿರುದ್ಧ ಒಟ್ಟು 764 ಪ್ರಕರಣ ದಾಖಲಾಗಿದ್ದು, ಈ ಪೈಕಿ ಬಾಂಗ್ಲಾ ವಲಸಿಗರ ವಿರುದ್ಧ 53 ಪ್ರಕರಣಗಳ ಹಾಗೂ ವಿದೇಶಿಗರ ವಿರುದ್ಧ 711 ಪ್ರಕರಣ ದಾಖಲು ಮಾಡಲಾಗಿದೆ. ಒಟ್ಟು 135 ಜನ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ಅಕ್ರಮವಾಗಿ ಭಾರತ ಪ್ರವೇಶಿಸಿ ಬೆಂಗಳೂರಿಗೆ ಬರುತ್ತಿದ್ದ 14 ಅಕ್ರಮ ಬಾಂಗ್ಲಾ ವಲಸಿಗರು ಸೆರೆ

ಅಕ್ರಮ ವಲಸಿಗರಿಗೆ ನಕಲಿ ಆಧಾರ್‌ ಕಾರ್ಡ್‌ ಹಾಗೂ ಇನ್ನಿತರ ದಾಖಲೆಗಳನ್ನು ಸೃಷ್ಟಿಸಿ ಕೊಡುತ್ತಿರುವ ಏಜೆಂಟ್‌ಗಳನ್ನು ಪತ್ತೆ ಮಾಡಿದ್ದು ಈ ಸಂಬಂಧ 4 ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ವಾಸಿಸುತ್ತಿರುವ 14 ಜನ ಪುರುಷರು ಹಾಗೂ 23 ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಅದೇ ರೀತಿ ಪತ್ತೆ ಮಾಡಿರುವ 53 ಬಾಂಗ್ಲಾ ವಲಸಿಗರನ್ನು ವಾಪಸ್‌ ಅವರ ದೇಶಕ್ಕೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದರು ಸಚಿವರು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ