
Devanahalli Chalo: ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು 1180 ದಿನಗಳಿಂದ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. 2000ಕ್ಕೂ ಹೆಚ್ಚು ರೈತರು ಭಾಗವಹಿಸಿರುವ ಈ ಪ್ರತಿಭಟನೆಯಲ್ಲಿ ಸರ್ಕಾರದ ಭೂ ಸ್ವಾಧೀನ ನೀತಿಗಳನ್ನು ತೀವ್ರವಾಗಿ ಖಂಡಿಸಲಾಗಿದೆ. ರೈತರು ತಮ್ಮ ಜಮೀನುಗಳನ್ನು ಕೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಈ ನಡುವೆ, ಪೊಲೀಸರು ಕೆಲವು ರೈತರನ್ನು ವಶಕ್ಕೆ ಪಡೆದಿರುವುದು ವಿವಾದಕ್ಕೆ ಕಾರಣವಾಗಿದೆ.
ನಿಮ್ಮ ನಡೆ ಸರಿಯಿಲ್ಲ, ನನ್ನ ಬಂಧಿಸಿ:
ನಟ ಪ್ರಕಾಶ್ ರಾಜ್ ಈ ಹೋರಾಟಕ್ಕೆ ಬೆಂಬಲ ಸೂಚಿಸಿ, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನಿಮ್ಮ ನಡೆ ಸರಿಯಲ್ಲ, ಸರ್ಕಾರವೇ, ನನ್ನನ್ನೂ ಬಂಧಿಸಿ ಎಂದು ಕಿಡಿಕಾರಿದ ಅವರು, ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ರೈತರನ್ನು ವಶಕ್ಕೆ ಪಡೆಯುತ್ತೀರಾ? ಈ ಹೋರಾಟ ಇನ್ನೂ ದೊಡ್ಡ ಮಟ್ಟಕ್ಕೆ ಹೋಗಲಿದೆ, ನಾನೂ ಈ ಹೋರಾಟದಲ್ಲಿ ಭಾಗಿಯಾಗುತ್ತೇನೆ ಎಂದು ಘೋಷಿಸಿದ್ದಾರೆ. ನಾಡಿನ ಎಲ್ಲ ರೈತರಿಗೆ ಈ ಹೋರಾಟದಲ್ಲಿ ಒಗ್ಗೂಡುವಂತೆ ಅವರು ಕರೆ ನೀಡಿದ್ದಾರೆ.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ರೈತರಿಗೆ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದಾರೆ. ಆದರೆ, ರೈತರು ತಮ್ಮ ನಿರ್ಧಾರದಿಂದ ಹಿಂದೆ ಸರಿಯದೆ, ಸರ್ಕಾರದ ನೀತಿಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ