
ಬೆಂಗಳೂರು (ಆ.13): ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳ ಅಸ್ಥಿಪಂಜರ ಹುಡುಕಾಟ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಮತ್ತು ಮುಂದಿನ ಕ್ರಮಗಳೇನು ಎಂಬುದರ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ, ತನಿಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಪರಮೇಶ್ವರ್, ಉತ್ಖನನ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಎಸ್ಐಟಿ ಮುಖ್ಯಸ್ಥರ ಅಭಿಪ್ರಾಯ ಪಡೆದಿದ್ದಾರೆ.
ಉತ್ಖನನ ಮುಂದುವರಿಕೆ ಬಗ್ಗೆ ಕುತೂಹಲ:
ಅನಾಮಿಕ ದೂರುದಾರನ ಹೇಳಿಕೆಯ ಆಧಾರದ ಮೇಲೆ ಆರಂಭವಾದ 'ಆಪರೇಷನ್ ಅಸ್ಥಿಪಂಜರ'ದಲ್ಲಿ ಇದುವರೆಗೆ ಸಾಮೂಹಿಕ ಸಮಾಧಿಗಳ ಯಾವುದೇ ಕುರುಹು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ, ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮತ್ತು ಪೊಲೀಸರ ಮಧ್ಯೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೊಂದಿಗೆ ಚರ್ಚಿಸಿದ ಗೃಹ ಸಚಿವರು, ಈವರೆಗಿನ ತನಿಖೆಯ ಎಲ್ಲಾ ಅಂಶಗಳನ್ನು ಅವರಿಂದ ಪಡೆದುಕೊಂಡಿದ್ದಾರೆ.
ಸರ್ಕಾರದ ಮುಂದಿನ ನಡೆ ಏನು?
ಗೃಹ ಸಚಿವ ಪರಮೇಶ್ವರ್ ಅವರು ಮುಖ್ಯಮಂತ್ರಿಗಳೊಂದಿಗೆ ಈ ವಿಚಾರದ ಬಗ್ಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 'ಧರ್ಮಸ್ಥಳದಲ್ಲಿನ ಉತ್ಖನನಕ್ಕೆ ಬ್ರೇಕ್ ಬೀಳುತ್ತದೆಯೇ ಅಥವಾ ಮುಂದುವರಿಯುತ್ತದೆಯೇ' ಎಂಬ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡುವ ಸಾಧ್ಯತೆ ಇದೆ. ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚನೆ ನೀಡುವ ನಿರೀಕ್ಷೆಯಿದೆ. ಈ ನಿರ್ಧಾರವು ಧರ್ಮಸ್ಥಳ ಪ್ರಕರಣದ ಮುಂದಿನ ಹಂತವನ್ನು ನಿರ್ಧರಿಸಲಿದ್ದು, ಸತ್ಯದ ಬೆನ್ನತ್ತಿದ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ