Dharmasthala Burude Case: ತಿಮರೋಡಿ ಜಾಮೀನು ಅರ್ಜಿ 30ಕ್ಕೆ ವಿಚಾರಣೆ

Kannadaprabha News, Ravi Janekal |   | Kannada Prabha
Published : Sep 28, 2025, 09:07 AM IST
Dharmasthala case mahesh shetty timarody bail plea to be heard on 30th

ಸಾರಾಂಶ

Dharmasthala Burude case: ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆಯಾಗಿದೆ. ಇದೇ ವೇಳೆ, ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಹೇಳಿಕೆ ದಾಖಲು ಪ್ರಕ್ರಿಯೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಪೂರ್ಣಗೊಂಡಿದೆ.

ಮಂಗಳೂರು (ಸೆ.28): ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆಯಾಗಿದೆ.

ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ವಿಚಾರಣೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ, ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ಅಭಿಯೋಜಕರು ಮತ್ತೆ ಕಾಲಾವಕಾಶ ಕೇಳಿದ್ದರಿಂದ ಮಂಗಳವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.

ಇದನ್ನೂ ಓದಿ: Mahesh Shetty Timarodi : ಅಕ್ರಮ ಶಸ್ತ್ರಾಸ್ತ್ರ ಕೇಸ್‌ನಲ್ಲಿ ಬೇಲ್‌ಗೆ ತಿಮರೋಡಿ ಅರ್ಜಿ!

ಬುರುಡೆ ಚಿನ್ನಯ್ಯ ಹೇಳಿಕೆ ದಾಖಲು ಪ್ರಕ್ರಿಯೆ ಪೂರ್ಣ

ಮಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ಆರೊಪಿ ಚಿನ್ನಯ್ಯನಿಂದ ಬೆಳ್ತಂಗಡಿ ತಾಲೂಕು ನ್ಯಾಯಾಲಯದಲ್ಲಿ ಬಿಎನ್‌ಎಸ್‌ಎಸ್‌ 183 ಹೇಳಿಕೆ ಪಡೆಯುವ ಪ್ರಕ್ರಿಯೆ ಶನಿವಾರ ಮುಕ್ತಾಯಗೊಂಡಿದೆ. ಈ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಸೆ.23, ಸೆ.25ರಂದು ನಡೆದಿತ್ತು. ಪೂರ್ಣವಾಗದ ಹಿನ್ನೆಲೆಯಲ್ಲಿ ಶನಿವಾರವೂ ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು. 

ಅದರಂತೆ ಕೋರ್ಟ್‌ಗೆ ಹಾಜರಾದ ಚಿನ್ನಯ್ಯನಿಂದ ಸಂಪೂರ್ಣ ಹೇಳಿಕೆ ಪಡೆದುಕೊಳ್ಳಲಾಗಿದೆ. 3 ದಿನ ಸುದೀರ್ಘ 12.30 ಗಂಟೆಗಳ ಕಾಲ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆದಿದೆ. ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶ ವಿಜಯೇಂದ್ರ ಟಿ. ಎದುರು ಹೇಳಿಕೆಯ ಪ್ರತಿಯನ್ನು ಆರೋಪಿಗೆ ಓದಿ ತಿಳಿಸಿ ದೃಢೀಕರಣ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌