
ಮಂಗಳೂರು (ಸೆ.4): ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಎಸ್ಐಟಿ ಕಸ್ಟಡಿ 3 ದಿನ ವಿಸ್ತರಣೆ ಆಗಿದೆ. ಆತನ ಕಸ್ಟಡಿ ಬುಧವಾರಕ್ಕೆ ಕೊನೆಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮ ಅವರು ಮತ್ತೆ ಆತನನ್ನು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ, ನ್ಯಾಯಾಧೀಶರು ಚಿನ್ನಯ್ಯನ ಕಸ್ಟಡಿ ವಿಸ್ತರಿಸಿದ್ದಾರೆ. ಚಿನ್ನಯ್ಯ ವಾಸವಿದ್ದ ಮಂಡ್ಯ ಹಾಗೂ ತಮಿಳುನಾಡಿನ ಮನೆ ಹಾಗೂ ಮತ್ತಿತರ ಕಡೆಗಳ ಸ್ಥಳ ಮಹಜರು ಪ್ರಕ್ರಿಯೆ ಇನ್ನೂ ನಡೆದಿಲ್ಲ. ಈ ಕಾರಣಕ್ಕೆ ಎಸ್ಐಟಿ ಅಧಿಕಾರಿಗಳು ಸೆ.6ರ ವರೆಗೆ ಚಿನ್ನಯ್ಯನನ್ನು ಕಸ್ಟಡಿಗೆ ಪಡೆದಿದ್ದಾರೆ.
ಬುರುಡೆ ಕೇಸ್: ವಕೀಲ ಕೆ.ವಿ.ಧನಂಜಯ ವಿರುದ್ಧ ದೂರು:
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯವಾದಿ ಕೆ.ವಿ.ಧನಂಜಯ ಹಾಗೂ ಅವರ ತಂಡದ ವಿರುದ್ಧ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥರು ಬುಧವಾರ ದೂರು ನೀಡಿದ್ದಾರೆ. ದೂರುದಾರ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯವಾದಿ ಕೆ.ವಿ. ಧನಂಜಯ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಧನಂಜಯ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು. ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರ ತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಎಂಬುವರ ವಿರುದ್ಧವೂ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್ಐಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ