ಧರ್ಮಸ್ಥಳಕ್ಕೆ ಬಿಜೆಪಿಗರಿಗಿಂತ ಹೆಚ್ಚು ಹೋಗೋದು ಕಾಂಗ್ರೆಸ್ಸಿಗರು: ಸಚಿವ ರಾಮಲಿಂಗಾರೆಡ್ಡಿ

Published : Aug 16, 2025, 07:14 AM IST
Minister Ramalinga reddy on dharmasthala case

ಸಾರಾಂಶ

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ವಿರುದ್ಧದ ಆರೋಪಗಳ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. 

ರಾಮನಗರ (ಆ.16): ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಸ್ಥಾನಕ್ಕೆ ಬಿಜೆಪಿಗಿಂತಲೂ ಹೆಚ್ಚು ಕಾಂಗ್ರೆಸ್‌ನವರು ಭೇಟಿ ನೀಡುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಧರ್ಮಸ್ಥಳಕ್ಕೆ ರಾಜ್ಯದಿಂದ ಮಾತ್ರವಲ್ಲ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಹರಿದಾಡುತ್ತಿರುವ ಆರೋಪಗಳ ಕುರಿತು ಸ್ಪಷ್ಟ ತನಿಖೆ ನಡೆಸಲಾಗುತ್ತಿದೆ. ಎಂದರು.

ಧರ್ಮಸ್ಥಳದ ಬುರುಡೆ ಕೇಸ್‌ಗೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ರೆಡ್ಡಿ, ಕೆಲವು ಹಿಂದೂಗಳೇ ಧರ್ಮಸ್ಥಳದ ವಿರುದ್ಧ ಮಾತನಾಡುತ್ತಿದ್ದಾರೆ. ಈಗ ಒಬ್ಬ ಅನಾಮಿಕ ವ್ಯಕ್ತಿ ‘ಹೆಣಗಳನ್ನು ಹೂತಿಟ್ಟಿದ್ದೇನೆ’ ಎಂದು ಆರೋಪಿಸಿದ್ದಾನೆ. ಈ ಆರೋಪಗಳ ಸತ್ಯಾಸತ್ಯತೆಯನ್ನು ತಿಳಿಯಲು ನಮ್ಮ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಈ ಅಪಪ್ರಚಾರಗಳಿಗೆ ಕಡಿವಾಣ ಹಾಕಲು ತನಿಖೆ ನಡೆಯುತ್ತಿದೆ, ಎಂದು ಸ್ಪಷ್ಟಪಡಿಸಿದರು.

ನಮಗೂ ಶ್ರೀ ಮಂಜುನಾಥನ ಮೇಲೆ ಭಕ್ತಿ ಇದೆ:

ನಮಗೂ ಶ್ರೀ ಮಂಜುನಾಥನ ಮೇಲೆ ಭಕ್ತಿಯಿದೆ ಎಂದ ಸಚಿವರು, ಬುರುಡೆ ಪ್ರಕರಣದಲ್ಲಿ ತನಿಖೆಯಿಂದ ಯಾವುದೇ ಸಾಕ್ಷ್ಯ ಸಿಗದಿದ್ದರೆ, ಈ ಆರೋಪ ಮಾಡಿದ ಅನಾಮಿಕ ವ್ಯಕ್ತಿಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳದ ಘನತೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು. ಈ ಘಟನೆಯಿಂದ ಧರ್ಮಸ್ಥಳದ ಭಕ್ತರಲ್ಲಿ ಆತಂಕ ಮೂಡಿದ್ದು, ತನಿಖೆಯ ಫಲಿತಾಂಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!