
ಮೈಸೂರು(ಆ.29): ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ವಿವಾದದ ವಿಚಾರವಾಗಿ ಮೈಸೂರಿನಲ್ಲೂ ಸಭೆ ನಡೆದಿತ್ತೇ ಎಂಬ ಅನುಮಾನವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಎರಡು ವರ್ಷ ಹಳೆಯ ಫೋಟೋದಿಂದ ಮತ್ತಷ್ಟು ತೀವ್ರಗೊಂಡಿದೆ. ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಸರ್ಕಾರಿ ಅತಿಥಿಗೃಹದ ಬಳಿ ಎರಡು ವರ್ಷಗಳ ಹಿಂದೆ ತೆಗೆದ ಫೋಟೋವೊಂದನ್ನು ಪ್ರವೀಣ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಚಿತ್ರದಲ್ಲಿ ಮಹೇಶ್ ಶೆಟ್ಟಿ ತಿಮ್ಮರೋಡಿ ಜೊತೆಗೆ ವಸಂತ್ ಗಿಳಿಯಾರ್ ಕಾಣಿಸಿಕೊಂಡಿದ್ದಾರೆ.
ಈ ಫೋಟೋದೊಂದಿಗೆ ಪ್ರವೀಣ್ ಎಂಬುವವರು ಬರೆದಿರುವ ಪೋಸ್ಟ್ನಲ್ಲಿ, 'ಅಣ್ಣನ ಜೊತೆ ಮೈಸೂರಿನ ಜಲದರ್ಶಿನಿಯಲ್ಲಿ ಎರಡು ವರ್ಷದ ಹಿಂದೆ ಸತ್ಯಶೋದನೆ ವರದಿ ಆರಂಭದ ದಿನ' ಎಂದು ಉಲ್ಲೇಖಿಸಲಾಗಿದೆ. ಆದರೆ ಇಂದು ವಸಂತ್ ಗಿಳಿಯಾರ್ ತಿಮ್ಮರೋಡಿ ವಿರುದ್ಧ ಧ್ವನಿಯೆತ್ತಿ, ಧರ್ಮಸ್ಥಳದ ಪರವಾಗಿ ನಿಲುವು ವ್ಯಕ್ತಪಡಿಸಿರುವುದು ಈ ವಿಷಯಕ್ಕೆ ಹೊಸ ತಿರುವು ನೀಡಿದೆ. ಈ ಫೋಟೋ ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಹೊರಗೆ ತೆಗೆದದ್ದು ಎಂದು ದೃಢಪಟ್ಟಿದ್ದು, ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಭೆ ನಡೆದಿರುವ ಸಾಧ್ಯತೆಯ ಬಗ್ಗೆ ಚರ್ಚೆಗೆ ಕಾರಣವಾಗಿದೆ.
ಧರ್ಮಸ್ಥಳ ವಿರುದ್ಧ ಸಂಚಿನಲ್ಲಿ ಮಾಸ್ಟರ್ ಮೈಂಡ್ ರೀತಿ ತಿಮ್ಮರೋಡಿ ಕೆಲಸ ಮಾಡಿದ್ದಾರಾ?ಹಿಂದಿನಿಂದಲೂ ಧರ್ಮಸ್ಥಳಕ್ಕೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆಗಳನ್ನ ನೀಡಿ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸದ್ಯ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಈ ನಡುವೆ ಫೋಟೋ ವೈರಲ್ ಆಗಿರುವುದರಿಂದ, ತಿಮ್ಮರೋಡಿ ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಧರ್ಮಸ್ಥಳದ ವಿಷಯಕ್ಕೆ ಸಂಬಂಧಿಸಿದ ಸಭೆಯೊಂದನ್ನು ನಡೆಸಿದ್ದರೆ ಎಂಬ ಪ್ರಶ್ನೆ ಎದ್ದಿದೆ.
ವಸಂತ್ ಗಿಳಿಯಾರ್ರ ಈಗಿನ ನಿಲುವು ಮತ್ತು ಎರಡು ವರ್ಷ ಹಳೆಯ ಫೋಟೋದ ನಡುವಿನ ವೈರುಧ್ಯವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ತಿಮ್ಮರೋಡಿ ಅಥವಾ ವಸಂತ್ ಗಿಳಿಯಾರ್ರಿಂದ ಯಾವುದೇ ಸ್ಪಷ್ಟೀಕರಣ ಬಂದಿಲ್ಲವಾದರೂ, ಈ ಫೋಟೋ ಮತ್ತು ಅದರ ಹಿಂದಿನ ಕಥೆಯು ಧರ್ಮಸ್ಥಳ ವಿವಾದಕ್ಕೆ ಮತ್ತಷ್ಟು ತಿರುವುಗಳನ್ನು ತಂದಿದೆ. ಮುಂದಿನ ಕೆಲವು ದಿನಗಳಲ್ಲಿ ಈ ವಿಷಯದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ