ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌, ಮನಾಫ್‌ ವಿಚಾರಣೆಗೆ ಗೈರು!

Ravi Janekal   | Kannada Prabha
Published : Sep 07, 2025, 01:40 AM IST
Girish mattannavar

ಸಾರಾಂಶ

ಧರ್ಮಸ್ಥಳದ ಸೌಜನ್ಯಾ ಬುರುಡೆ ಪ್ರಕರಣದ ತನಿಖೆಯಲ್ಲಿ ವಿಶೇಷ ತನಿಖಾ ತಂಡವು ನಾಲ್ವರನ್ನು ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಸತ್ಯಾಂಶ ಬಯಲಿಗೆ ಬರುವುದು ಯಾವಾಗ ಎಂಬ ಕುತೂಹಲ ಮೂಡಿದೆ.

ಮಂಗಳೂರು (ಸೆ.7): ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಶನಿವಾರ ನಾಲ್ವರ ವಿಚಾರಣೆ ಮುಂದುವರಿಸಿದ್ದಾರೆ.

ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್‌, ಯುಟ್ಯೂಬರ್‌ ಅಭಿಷೇಕ್, ಸೌಜನ್ಯ ಮಾವ ವಿಠಲಗೌಡ ಇವರನ್ನು ಶುಕ್ರವಾರ ತಡರಾತ್ರಿವರೆಗೂ ವಿಚಾರಣೆ ನಡೆಸಲಾಗಿತ್ತು. ಬಳಿಕ ಶನಿವಾರ ಮತ್ತೆ ವಿಚಾರಣೆ ಮುಂದುವರಿಸಲಾಯಿತು. ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಖುದ್ದು ಮಟ್ಟಣ್ಣವರ್‌ ವಿಚಾರಣೆ ನಡೆಸಿದ್ದಾರೆ.

ಯೂಟ್ಯೂಬರ್‌ ಅಭಿಷೇಕ್‌ನನ್ನು ನಾಲ್ಕನೇ ದಿನ ವಿಚಾರಣೆ ನಡೆಸಲಾಗಿದೆ. ಜಯಂತ್‌ರನ್ನು ಮೂರನೇ ದಿನ ವಿಚಾರಣೆ ನಡೆಸಲಾಗಿದೆ. ಮಟ್ಟಣ್ಣನವರ್ ಹಾಗೂ ವಿಠಲಗೌಡ ಇವರ ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ. ಈ ನಾಲ್ಕು ಮಂದಿಯನ್ನೂ ಎಸ್‌ಐಟಿ ಅಧಿಕಾರಿಗಳು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸುತ್ತಿದ್ದಾರೆ.

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯನನ್ನು ಪರಿಚಯಿಸಿದ್ದು ಯಾರು? ಚಿನ್ನಯ್ಯ ಧರ್ಮಸ್ಥಳ ತೊರೆದ ಬಳಿಕ ಮೊದಲು ಸಂಪರ್ಕಕ್ಕೆ ಬಂದವರು ಯಾರು? ವಿಠಲಗೌಡಗೆ ಮೊದಲಿನಿಂದಲೂ ಚಿನ್ನಯ್ಯನ ಪರಿಚಯವಿದ್ದ ಬಗ್ಗೆ ಮಾಹಿತಿ ಪಡೆದ ಎಸ್‌ಐಟಿ ತಂಡ, ವಿಠಲಗೌಡ ಮೂಲಕ ಆತ ಬುರುಡೆ ಗ್ಯಾಂಗ್‌ ಸಂಪರ್ಕಕ್ಕೆ ಬಂದಿರುವ ಸಂಶಯವನ್ನು ವ್ಯಕ್ತಪಡಿಸಿದೆ.

ಮನಾಫ್‌ ವಿಚಾರಣೆಗೆ ಗೈರು

ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿರುವ ಕೇರ‍ಳದ ಯೂಟ್ಯೂಬರ್‌ ಮನಾಫ್‌ ಶನಿವಾರ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಗಿಲ್ಲ. ಸೋಮವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಮನಾಫ್‌ಗೆ ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ಜಾರಿಗೊಳಿಸಿತ್ತು. ತಪ್ಪಿದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್