
ಬೆಂಗಳೂರು (ಆ.22) ಧರ್ಮಸ್ಥಳ ಪ್ರಕರಣದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಸುಜಾತ್ ಭಟ್ ಮಗಳು ಅನನ್ಯಾ ಭಟ್ ನಾಪತ್ತೆ ಕೇಸ್ ಅಸಲಿ ವಿಚಾರ ಹೊರಬಂದಿದೆ. ತಾನು ಹೇಳಿದ್ದೆಲ್ಲಾ ಸುಳ್ಳು, ಅನನ್ಯಾ ಭಟ್ ಅನ್ನೋ ಮಗಳೇ ಇರಲಿಲ್ಲ. ನಾನು ಹೇಳಿಕೊಟ್ಟ ಹಾಗೇ ಹೇಳಿದ್ದೇನೆ ಎಂದು ಇನ್ಸೈಟ್ರಶ್ಗೆ ಯೂಟ್ಯೂಬ್ಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣನವರ್,ಜಯಂತ್ ಹೇಳಿದ ಹಾಗೇ ಹೇಳಿದ್ದೇನೆ. ಸುಳ್ಳು ಹೇಳುವ ಪರಿಸ್ಥಿತಿ ಬಂದಿತ್ತು. ಆಸ್ತಿ ಸಿಗಲಿಲ್ಲ ಅನ್ನೋ ಕಾರಣಕ್ಕೆ ಸುಳ್ಳು ಹೇಳಿದೆ ಎಂದು ಯೂಟ್ಯೂಬ್ ಸಂದರ್ಶನದಲ್ಲಿ ಹೇಳಿದ್ದಾರೆ.
ಇನ್ಸೈಟ್ರಶ್ಗೆ ಸಂದರ್ಶನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸುಜಾತಾ
ನಿಮ್ಮ ಮಗಳು ಅನ್ನೋ ಕತೆ ಸತ್ಯವೇ ಅಥವಾ ಸುಳ್ಳೇ ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, ಅನನ್ಯಾ ಭಟ್ ಅನ್ನೋ ಮಗಳು ಸುಳ್ಳು ಕತೆ, ಗಿರೀಶ್ ಮಟ್ಟೆಣ್ಣನವರ್, ಜಯಂತ್ ಟಿ ಹೇಳಿದ ಹಾಗೇ ನಾನು ಹೇಳಿದೆ. ಆಸ್ತಿ ವಿಚಾರವಾಗಿ ಈ ಕತೆ ಹೇಳಿಕೊಟ್ಟಿದ್ದರು. ಹೀಗಾಗಿ ಈ ಕತೆ ಹೇಳಿದೆ. ನನಗೆ ದುಡ್ಡಿಗಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ನನಗೂ ಯಾರೂ ಆಫರ್ ಮಾಡಿಲ್ಲ. ಆದರೆ ನನ್ನ ತಾತನ ಆಸ್ತಿಯನ್ನು ಧರ್ಮಸ್ಥಳಕ್ಕೆ ದಾನವಾಗಿ ಹೇಗೆ ಕೊಟ್ಟರು ಅನ್ನೋದು ನನ್ನ ಪ್ರಶ್ನೆ. ಅದು ನನಗೂ ಸಿಗಬೇಕಿತ್ತು. ಆದರೆ ನನಗೆ ಪಾಲು ಸಿಗಲಿಲ್ಲ ಎಂದು ಸುಜಾತ್ ಭಟ್ ನೋವು ತೋಡಿಕೊಂಡಿದ್ದಾಳೆ.
ಮಗಳ ಪೋಟೋ ಫೇಕ್ ಎಂದ ಸುಜಾತಾ ಭಟ್
ಮಗಳು ಫೋಟೋ ಬಿಡುಗಡೆ ಮಾಡಿದ್ದು ಸುಳ್ಳು, ಅದು ಖಂಡಿತ ಸುಳ್ಳು ಫೋಟೋ ಎಂದು ಸುಜಾತಾ ಭಟ್ ಹೇಳಿದ್ದಾರೆ. ಇದೇ ವೇಳೆ ತಾನು ಧರ್ಮಸ್ಥಳದ ಜನರ ನಂಬಿಕೆ, ಜನರ ಭಾವನೆ ಜೊತೆ ಆಟವಾಡಿಲ್ಲ. ಆದರೆ ನನ್ನನ್ನು ಜನರ ಭಾವನೆ ಜೊತೆ ಆಟವಾಡುವಂತೆ ಕೆಲವರು ಮಾಡಿದರು ಎಂದು ಸುಜಾತಾ ಭಟ್ ಹೇಳಿದ್ದಾರೆ. ಆಸ್ತಿಯಲ್ಲಿ ನನಗೆ ಪಾಲು ನೀಡದೆ ಕೊಟ್ಟಿದ್ದಾರೆ. ಈ ನೋವು ನನಗಿದೆ ಎಂದು ಹೇಳಿದ್ದಾರೆ.
ನಮ್ಮ ಕುಟುಂಬದ ದೇವರನ್ನು ಜೈನರಿಗೆ ಕೊಟ್ಟಿರುವ ನೋವಿದೆ. ಒಂದು ಟ್ರಸ್ಟ್ಗೆ ಕೊಡಬಹುದಿತ್ತು. ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾರೆ, ಧಿಕ್ಕರಿಸಿದ್ದಾರೆ, ಮಗಳೇ ಇಲ್ಲ ಎಂದು ಇವರೇ ಸಹಿ ಹಾಕಿದಾಗ ನನಗೆ ಎಷ್ಟು ನೋವಾಗಿರಬೇಕು. ನನ್ನ ಸಹಿ ಇಲ್ಲದೆ ಕುಟುಂಬಸ್ಥರು ನೇರವಾಗಿ ಧರ್ಮಸ್ಥಳಕ್ಕೆ ಆಸ್ತಿ ನೀಡಿದ್ದಾರೆ. ಇದು ಎಷ್ಟು ಸರಿ. ನಾನು ಧರ್ಮಸ್ಥಳ ದೇವಸ್ಥಾನಕ್ಕೆ ಧಕ್ಕೆ ತಂದಿಲ್ಲ. ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಗೆ ಧಕ್ಕೆ ತಂದಿಲ್ಲ. ಧರ್ಮಸ್ಥಳ ಗ್ರಾಮದಲ್ಲಿ ಎಂದು ಹೇಳಿದ್ದೇನೆ ಎಂದು ಸುಜಾತ್ ಭಟ್ ತಮ್ಮ ಸುಳ್ಳಿನ ಅಸಲಿ ಕತೆಯನ್ನು ಬಹಿರಂಗಪಡಿಸಿದ್ದಾರೆ.
ಆಸ್ತಿಗಾಗಿ ಅನನ್ಯಾ ಭಟ್ ಕತೆ ಕಟ್ಟಿದ್ದೇನೆ
ಆಸ್ತಿಗಾಗಿ ಅನನ್ಯಾ ಭಟ್ ಕತೆ ಕಟ್ಟಿದ್ದೇನೆ. ನಮ್ಮ ಕುಟುಂಬಸ್ಥರು ನನಗೆ ಮಾಹಿತಿ ನೀಡದೆ ಆಸ್ತಿ ದಾನ ಮಾಡಿದ್ದಾರೆ. ಆಸ್ತಿ ಪಡೆಯುವಾಗ ಧರ್ಮಸ್ಥಳದವರು ಕುಟುಂಬದ ವಕ್ಷ ಕೊಡಿ ಎಂದು ಅವರು ಕೇಳಬಹುದಿತ್ತು. ಮೂರು ಹೆಣ್ಣುಮಕ್ಕಳು ಎಂದರೆ ನಾನು ಯಾರು? ನನ್ನನ್ನು ಕೇಳದೇ ಹೇಗೆ ಆಸ್ತಿ ಕೊಟ್ಟರು. ಧರ್ಮಸ್ಧಳದರು ಕೊನೆ ಪಕ್ಷ ಇಡೀ ಕುಟುಂಬಸ್ಥರ ಸಹಿ ಪಡೆಯಬೇಕಿತ್ತು.ಆದರೆ ಯಾವುದು ಮಾಡಿಲ್ಲ ಎಂದು ಸುಜಾತ್ ಭಟ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ