ರಷ್ಯಾದ ಸ್ಪುಟ್ನಿಕ್‌ ಲಸಿಕೆ ಧಾರವಾಡದಲ್ಲಿ ಉತ್ಪಾದನೆ!

Published : May 18, 2021, 07:33 AM ISTUpdated : May 18, 2021, 11:31 AM IST
ರಷ್ಯಾದ ಸ್ಪುಟ್ನಿಕ್‌ ಲಸಿಕೆ ಧಾರವಾಡದಲ್ಲಿ ಉತ್ಪಾದನೆ!

ಸಾರಾಂಶ

* ರಷ್ಯಾದ ಸ್ಪುಟ್ನಿಕ್‌ ಲಸಿಕೆ ಧಾರವಾಡದಲ್ಲಿ ಉತ್ಪಾದನೆ * ಡಾ| ರೆಡ್ಡೀಸ್‌ ಲ್ಯಾಬ್‌ ಜತೆ ಶಿಲ್ಪಾ ಮೆಡಿಕೇರ್‌ ಒಪ್ಪಂದ * ಧಾರವಾಡದಲ್ಲಿ ವರ್ಷಕ್ಕೆ 5 ಕೋಟಿ ಲಸಿಕೆ ಉತ್ಪಾದನೆ

ನವದೆಹಲಿ(ಮೇ.18): ಕೊರೋನಾ ಲಸಿಕೆಗಳಿಗೆ ದೇಶಾದ್ಯಂತ ತೀವ್ರ ಕೊರತೆ ಎದುರಾಗಿರುವಾಗಲೇ, ವಿಶ್ವದ ಮೊದಲ ಕೋವಿಡ್‌ ಲಸಿಕೆ ಎಂಬ ಹಿರಿಮೆ ಹೊಂದಿರುವ ರಷ್ಯಾದ ಸ್ಪುಟ್ನಿಕ್‌-5 ಅನ್ನು ಕರ್ನಾಟಕದಲ್ಲಿ ಉತ್ಪಾದಿಸಲು ಕಂಪನಿಯೊಂದು ಮುಂದೆ ಬಂದಿದೆ. ರಾಯಚೂರಿನ ಶಿಲ್ಪಾ ಮೆಡಿಕೇರ್‌ ಎಂಬ ಔಷಧ ಕಂಪನಿಯು ತನ್ನ ಅಂಗ ಸಂಸ್ಥೆಯಾದ ಶಿಲ್ಪಾ ಬಯೋಲಾಜಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ಧಾರವಾಡ ಘಟಕದಲ್ಲಿ ಲಸಿಕೆ ಉತ್ಪಾದಿಸಲು ಡಾ| ರೆಡ್ಡೀಸ್‌ ಲ್ಯಾಬೋರೇಟರಿ ಜತೆ ಒಪ್ಪಂದ ಮಾಡಿಕೊಂಡಿದೆ.

ಮತ್ತೊಂದೆಡೆ, ಸ್ಪುಟ್ನಿಕ್‌ ಲಸಿಕೆ ಅಭಿಯಾನವನ್ನು ಆರಂಭಿಸುವ ಸಂಬಂಧ ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಡಾ| ರೆಡ್ಡೀಸ್‌ ಲ್ಯಾಬ್‌ ಸೋಮವಾರ ಮತ್ತೊಂದು ಒಪ್ಪಂದ ಮಾಡಿಕೊಂಡಿವೆ. ಸೋಮವಾರದಿಂದಲೇ ಹೈದರಾಬಾದ್‌ನಲ್ಲಿ ಪ್ರಾಯೋಗಿಕವಾಗಿ ಲಸಿಕೆ ಅಭಿಯಾನ ಆರಂಭವಾಗಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ಪ್ರಾರಂಭವಾಗಲಿದೆ. ಮುಂಬರುವ ದಿನಗಳಲ್ಲಿ ಬೆಂಗಳೂರಿನ ಆಸ್ಪತ್ರೆಗಳಲ್ಲೂ ಈ ಲಸಿಕೆ ಸಿಗಲಿದ್ದು, ಒಂದು ಡೋಸ್‌ಗೆ 995.40 ರು. ಬೆಲೆ ಇದೆ.

"

ಧಾರವಾಡದಲ್ಲಿ ಲಸಿಕೆ:

ಸ್ಪುಟ್ನಿಕ್‌ ಲಸಿಕೆಯನ್ನು 2020ರ ಆಗಸ್ಟ್‌ನಲ್ಲಿ ರಷ್ಯಾ ನೋಂದಣಿ ಮಾಡಿಸಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಹೈದರಾಬಾದ್‌ ಮೂಲದ ಡಾ| ರೆಡ್ಡೀಸ್‌ ಲ್ಯಾಬೋರೇಟರಿ ಕಂಪನಿ ರಷ್ಯಾ ಜತೆ ಒಪ್ಪಂದ ಮಾಡಿಕೊಂಡು ಕ್ಲಿನಿಕಲ್‌ ಟ್ರಯಲ್‌ ಆರಂಭಿಸಿತ್ತು. ಬಳಿಕ ಭಾರತದಲ್ಲಿ ಬಳಸಲು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಂಡಿತ್ತು. ಮೇ 1ರಂದು ಭಾರತಕ್ಕೆ ಮೊದಲ ಬ್ಯಾಚ್‌ನ ಲಸಿಕೆಯನ್ನು ಡಾ| ರೆಡ್ಡೀಸ್‌ ಲ್ಯಾಬ್‌ ಆಮದು ಮಾಡಿಕೊಂಡಿತ್ತು. ಇದೀಗ ಆ ಕಂಪನಿ ಜತೆ ಧಾರವಾಡದ ಶಿಲ್ಪಾ ಬಯೋಲಾಜಿಕಲ್ಸ್‌ ಪ್ರೈವೇಟ್‌ ಲಿಮಿಟೆಡ್‌ ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ಧಾರವಾಡದಲ್ಲಿರುವ ತನ್ನ ಘಟಕದಲ್ಲಿ ಸ್ಪುಟ್ನಿಕ್‌ ಲಸಿಕೆಯನ್ನು ಶಿಲ್ಪಾ ಬಯೋಲಾಜಿಕಲ್ಸ್‌ ವರ್ಷಕ್ಕೆ 5 ಕೋಟಿ ಲಸಿಕೆಯಂತೆ ಉತ್ಪಾದಿಸಲಿದೆ. ಈ ಸಂಬಂಧ ಶಿಲ್ಪಾ ಬಯೋಲಾಜಿಕಲ್ಸ್‌ ಕಂಪನಿಗೆ ಡಾ

ರೆಡ್ಡೀಸ್‌ ಸಂಸ್ಥೆ ಸ್ಪುಟ್ನಿಕ್‌ ತಂತ್ರಜ್ಞಾನವನ್ನು ವರ್ಗಾವಣೆ ಮಾಡಲಿದೆ ಎಂದು ಶಿಲ್ಪಾ ಮೆಡಿಕೇರ್‌ ತಿಳಿಸಿದೆ.

ಶಿಲ್ಪಾ ಬಯೋಲಾಜಿಕಲ್ಸ್‌ ಲಸಿಕೆಯನ್ನು ಉತ್ಪಾದಿಸಿ ಕೊಡಲಿದೆ. ಡಾ| ರೆಡ್ಡೀಸ್‌ ಲ್ಯಾಬ್‌ ವಿತರಣೆ/ಮಾರಾಟ ಹಕ್ಕು ಹೊಂದಿರುತ್ತದೆ. ಒಂದೇ ಡೋಸ್‌ನ ಕೊರೋನಾ ಲಸಿಕೆಯಾದ ಸ್ಪುಟ್ನಿಕ್‌ ಲೈಟ್‌ ಅನ್ನೂ ಮುಂಬರುವ ದಿನಗಳಲ್ಲಿ ಉತ್ಪಾದಿಸುವ ಸಂಬಂಧ ಎರಡೂ ಸಂಸ್ಥೆಗಳು ಚಿಂತನೆಯಲ್ಲಿವೆ ಎಂದು ಶಿಲ್ಪಾ ಮೆಡಿಕೇರ್‌ ಕಂಪನಿ ತಿಳಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!