ಧಾರವಾಡ ನೀರಾವರಿ ನಿಗಮದ ಇಂದುಮತಿ ಕಾಂಬಳೆ ಇನ್ನಿಲ್ಲ! ಬಸ್‌ನಲ್ಲಿ ಪ್ರಯಾಣಿಸುವಾಗ ಹಾರ್ಟ್ ಅಟ್ಯಾಕ್

Published : Apr 02, 2025, 09:24 PM ISTUpdated : Apr 02, 2025, 09:45 PM IST
ಧಾರವಾಡ ನೀರಾವರಿ ನಿಗಮದ ಇಂದುಮತಿ ಕಾಂಬಳೆ ಇನ್ನಿಲ್ಲ! ಬಸ್‌ನಲ್ಲಿ ಪ್ರಯಾಣಿಸುವಾಗ ಹಾರ್ಟ್ ಅಟ್ಯಾಕ್

ಸಾರಾಂಶ

ಧಾರವಾಡದ ನೀರಾವರಿ ನಿಗಮದ ಗುಮಾಸ್ತೆ ಇಂದುಮತಿ ಕಾಂಬಳೆ (58) ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್‌ನಲ್ಲಿ ಕುಳಿತಿದ್ದಾಗಲೇ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಸಾವನ್ನಪ್ಪಿದ್ದಾರೆ. ಈ ಘಟನೆಯು ಬಸ್‌ನ ಸಿಸಿಟಿವಿಯಲ್ಲಿ ದಾಖಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮುನ್ನವೇ ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ.

ಧಾರವಾಡ (ಏ.02): ಕರ್ನಾಟಕ ಸರ್ಕಾರದ ನೀರಾವರಿ ನಿಗಮದಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದ ಇಂದುಮತಿ ಕಾಂಬಳೆ ಅವರು ಬಸ್‌ನಲ್ಲಿ ಪ್ರಯಾಣ ಮಾಡುವಾಗಲೇ ಹಾರ್ಟ್ ಅಟ್ಯಾಕ್‌ಗೆ ಬಲಿಯಾಗಿದ್ದಾರೆ. ಕುಳಿತಲ್ಲಿಯೇ ಪ್ರಾಣ ಬಿಟ್ಟ ವಿಡಿಯೋ ಬಸ್‌ನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

ಇಂದುಮತಿ ಅವರು ಖಾಸಗಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದಾಗಲೇ ಕಿಟಕಿಯಲ್ಲಿ ನೋಡುತ್ತಾ ಕುಳಿತಿದ್ದರು. ತನ್ನ ಪಕ್ಕದಲ್ಲಿ ಬ್ಯಾಗ್‌ ಹಿಡಿದುಕೊಂಡು ಕುಳಿತಿದ್ದರು. ಮೊದಲೇ ಜನರು ಕಡಿಮೆ ಇದ್ದ ಬಸ್‌ನಲ್ಲಿ ಎರಡು ಸೀಟುಗಳಿಗೆ ಒಬ್ಬರಂತೆ ಅಲ್ಲೊಬ್ಬ, ಇಲ್ಲೊಬ್ಬರು ಕುಳಿತುಕೊಂಡಿದ್ದರು. ಈ ವೇಳೆ ದಿಡೀರನೆ ಇವರಿಗೆ ಹೃದಯಾಘಾತ ಆಗಿದ್ದು, ಕುಳಿತ ಸೀಟಿನಲ್ಲಿಯೇ ಹಿಂದಕ್ಕೆ ತಲೆ ಒರಗಿಸಿದ್ದಾರೆ. ಅವರ ಕೈಲಿದ್ದ ಬ್ಯಾಗ್ ಕೆಳಗೆ ಬಿದ್ದಿದೆ. ಕೆಲ ನಿಮಿಷ ಯಾರೊಬ್ಬರೂ ಮಹಿಳೆಯನ್ನು ಗಮನಿಸಿಯೇ ಇಲ್ಲ. ಬಸ್ ಒಂದು ಸ್ಟಾಪ್‌ನಲ್ಲಿ ನಿಂತಾಗ ಹಿಂಬದಿ ಸೀಟಿನಲ್ಲಿದ್ದ ವ್ಯಕ್ತಿ ಬಂದು ಮಹಿಳೆಗೆ ಏನೋ ಆಗಿದೆ ಎಂದು ಬಸ್‌ನ ಸಿಬ್ಬಂದಿಗೆ ತಿಳಿಸಿದ್ದಾರೆ. 

ಆಗ ಬಸ್‌ನ ಕಂಡಕ್ಟರ್ ಬಂದು ನೋಡಿದಾಗ ಮಹಿಳೆ ಎಚ್ಚರಗೊಂಡಿಲ್ಲ. ಕೂಡಲೇ ಬಸ್‌ನಲ್ಲಿದ್ದ ಬೆರಳೆಣಿಕೆ ಪ್ರಯಾಣಿಕರು ಮಹಿಳೆಯ ಸೀಟಿನ ಬಳಿ ಬಂದು ನೀರು ಹಾಕಿ ಎಬ್ಬಿಸಲು ಮುಂದಾಗಿದ್ದಾರೆ. ಆದರೆ, ಆಕೆಯ ಜೀವ ಅದಾಗಲೇ ಹಾರಿ ಹೋಗಿತ್ತು ಎನ್ನುತ್ತದೆ. ಮತ್ತೆ ಮೇಲೆ ಏಳಲೇ ಇಲ್ಲ. ಮತ್ತೊಬ್ಬ ವ್ಯಕ್ತಿ ಬಂದು ಸುಮಾರು ಹೊತ್ತು ನಾಡಿಮಿಡಿತವನ್ನು ಹಿಡಿದು ನೋಡಿದ್ದಾರೆ. ಆಗ ಮಹಿಳೆಯ ಜೀವ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದಾದ ನಂತರ ಧಾರವಾಡ ನಗರದ ಜಿಲ್ಲಾ ಆಸ್ಪತ್ರೆಗೆ ಬಸ್‌ ಅನ್ನು ತಿರುಗಿಸಿದ್ದಾರೆ.

ಇದನ್ನೂ ಓದಿ: ನಟಿ ರನ್ಯಾ ರಾವ್ ಚಿನ್ನದ ಕೇಸ್‌, ಬಂಧಿತ ಸಾಹಿಲ್ ಜೈನ್‌ಗೆ ನ್ಯಾಂಯಾಂಗ ಬಂಧನ

ಜಿಲ್ಲಾಸ್ಪತ್ರೆಗೆ ಬರುವ ವೇಳೆಗೆ ಆಕೆ ಸತ್ತಿದ್ದು ದೃಢಪಟ್ಟಿದ್ದು, ವೈದ್ಯರು ಮತ್ತೊಮ್ಮೆ ಪರಿಶೀಲನೆ ಮಾಡಿ ಸಾವಿನ ಬಗ್ಗೆ ಖಚಿತಪಡಿಸಿದ್ದಾರೆ. ಇನ್ನು ಮೃತ ಮಹಿಳೆ ಇಂದುಮತಿ ಕಾಂಬಳೆ (58) ಧಾರವಾಡದ ನೀರಾವರಿ ನಿಗಮದ ಕಚೇರಿಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಸಂಜೆ ಖಾಸಗಿ ಬಸ್‌ನಲ್ಲಿ ಮನೆಗೆ ಹೋಗುವಾಗ ಬೇಂದ್ರೆ ಬಸ್‌ನಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಎಲ್ಲ ದೃಶ್ಯಗಳೂ ಕೂಡ ಬಸ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌